Home> Karnataka
Advertisement

ಇಷ್ಠಾರ್ಥ ಸಿದ್ದಿಗಾಗಿ ಕುಟುಂಬ ಸಮೇತ ದೇವರ ಮೊರೆಹೋದ ಡಿಕೆ ಶಿವಕುಮಾರ್..!

DK Shivakumar : ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಬಿಸಿ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಂಕಷ್ಟ,ದೋಷ,ಶತ್ರು ಬಾಧೆ ಬಾದೆ, ಇಷ್ಠಾರ್ಥ ಸಿದ್ದಿಗಾಗಿ ಕುಟುಂಬ ಸಮೇತವಾಗಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದ್ದಾರೆ. 
 

ಇಷ್ಠಾರ್ಥ ಸಿದ್ದಿಗಾಗಿ ಕುಟುಂಬ ಸಮೇತ ದೇವರ ಮೊರೆಹೋದ ಡಿಕೆ ಶಿವಕುಮಾರ್..!

Congress : ಡಿ. ಕೆ. ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು. 

ಇದನ್ನೂ ಓದಿ-"ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ" 

ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿರೋ ಡಿಕೆ ಶಿವಕುಮಾರ್‌ ಎಲ್ಲಾ ಚುನಾವಣಾ ಸಂಕಷ್ಟಗಳಿಂದ ದೂರವಾಗಲು  ಗುರುಗಳಾದ ಶ್ರೀ ಹರೀಶ್ ಆರಾಧ್ಯ ಅವರ ಮಾರ್ಗ ಅರ್ಶದನದಂತೆ ಬೆಳಗಳಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಮಹಾ ಆರತಿ ಪೂಜೆಯನ್ನು ಮಾಡಿಸಿದ್ದಾರೆ. ಇದಲ್ಲದೇ ಮಧ್ಯಪ್ರದೇಶದ ಶ್ರೀ ಮಹಾಕಾಲೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಸಹ ಸಲ್ಲಿಸಲಿದ್ದಾರೆ. 

ಸದ್ಯಕ್ಕೆ ಚುನಾವಣಾ ಬಿಸಿಯ ಮದ್ಯ ಡಿ.ಕೆ. ಶಿವಕುಮಾರ್‌ ಪೂಜೆಯನ್ನು ಸಲ್ಲಿಸುತ್ತಿರುವುದ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

ಇದನ್ನೂ ಓದಿ-"2 % ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು" 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Read More