ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa)ರವರ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಈಶ್ವರಪ್ಪ ದಂಪತಿ ಅಪಾಯದಿಂದ ಪಾರಾಗಿದ್ದಾರೆ.
ಸಚಿವರ ಕೋಣೆಯಲ್ಲಿ ಎಸಿಯಿಂದ ಕಾಣಿಸಿಕೊಂಡ ಬೆಂಕಿ:
ಈಶ್ವರಪ್ಪ ಕೂಡಲೇ ತಮ್ಮ ಅಳಿಯನಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಕ್ಷಣಾರ್ಧದಲ್ಲಿ ಸಂಪೂರ್ಣ ರೂಮ್ ಆವರಿಸಿದ ಬೆಂಕಿಯಿಂದಾಗಿ ಇಡೀ ಬಂಗಲೆಯ ವಿದ್ಯುತ್ ವೈರಿಗಂಗಳು ಮತ್ತು ವುಡ್ ವರ್ಕ್ ನ ಹಲವು ಸಾಮಾಗ್ರಿಗಳು ಭಾಗಶಃ ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ ಒಂದು ಕೊಠಡಿ ಸಂಪೂರ್ಣ ಸುಟ್ಟು ಹೋಗಿದ್ದು, ಬಟ್ಟೆ, ಬೆಡ್, ಕರ್ಟನ್ ಸೇರಿದಂತೆ ಎಲ್ಲವೂ ಸುಟ್ಟು ಕರಕಲಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಈಶ್ವರಪ್ಪ ದಂಪತಿ ಹೊರಗೆ ಬಂದಿದ್ದರಿಂದ ಯಾರಿಗೂ ಏನೂ ಅಪಾಯವಾಗಿಲ್ಲ.