ಬೆಂಗಳೂರು: ಲಾಕ್ಡೌನ್ ಮೂರನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು 'ಹೆತ್ತ ಮಕ್ಕಳು' ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲೂ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನೂ ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, 'ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು' ಎಂದಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ 'ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
On one hand we see farmers throwing their produce in despair and losing their livelihoods. On the other hand supplies to towns are depleting. This is threatening both lives and livelihoods. Government must act swiftly and effectively.
2/3 pic.twitter.com/uLR14Qhmxj— H D Kumaraswamy (@hd_kumaraswamy) April 11, 2020
ಮತ್ತೊಂದು ಟ್ವೀಟ್ ನಲ್ಲಿ ಸರ್ಕಾರ 'ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ' ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬುದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ ಎಂದಿದ್ದಾರೆ.
I urge the state government to immediately announce relief package to farmers by way of direct benefit transfer mechanism and purchase all the agricultural produce so as to avoid farmer suicides.
3/3 pic.twitter.com/y2ymEPWhpA— H D Kumaraswamy (@hd_kumaraswamy) April 11, 2020
ಇದಲ್ಲದೆ 'ಕೈಗೆ ಬಂದ ಬೆಳೆಯು ಮಾರಾಟವಾಗದೆ ಮುಂದೇನು? ಎಂದು ಚಿಂತಾಕ್ರಾಂತರಾಗಿರುವ ರೈತರಿಗೆ ಸಹಾಯ ಹಸ್ತಚಾಚಲು ಆಮೆವೇಗದಲ್ಲಿರುವ ಸರ್ಕಾರ ಮುಂಗಾರು ಬೆಳೆಗೆ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಕೊರತೆ ಉಂಟಾಗದಂತೆ ಎಚ್ಚರ ವಹಿಸುತ್ತಿರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ' ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಗದೊಂದು ಟ್ವೀಟ್ ನಲ್ಲಿ 'ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು. ಲಾಕ್ ಡೌನ್ ಮುಂದುವರಿಕೆ ನಿಚ್ಚಳವಾಗಿರುವ ಹಿನ್ನೆಲೆಯಲ್ಲಿ ತುರ್ತು ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸುತ್ತೇನೆ' ಎಂದಿದ್ದಾರೆ.