Home> Karnataka
Advertisement

HD Kumaraswamy: 'ಎಲ್ಲರ ಮನೆ ದೋಸೆ ತೂತೇ; ನಾನು ಒಂದು ಬಾರಿ ಎಡವಿದ್ದೆ'

ಎಲ್ಲರ ಮನೆ ದೋಸೆನ ತೂತೇ, ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ

HD Kumaraswamy: 'ಎಲ್ಲರ ಮನೆ ದೋಸೆ ತೂತೇ; ನಾನು ಒಂದು ಬಾರಿ ಎಡವಿದ್ದೆ'

ಬೆಂಗಳೂರು: ಎಲ್ಲರ ಮನೆ ದೋಸೆನ ತೂತೇ, ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವ ಸುಧಾಕರ್(K Sudhakar) ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಭೂಮಿ ಮೇಲೆ ಜನಿಸಿರುವ ಪ್ರತಿಯೊಂದು ಜೀವಿಗೂ ಸಹಜ ಪ್ರಕ್ರಿಯೆ ಇದೆ, ನಾನು ಈ ಹಿಂದೆ ಅಧಿವೇಶನದಲ್ಲಿ ನಾನು ಎಡವಿದ್ದ ಬಗ್ಗೆ ಹೇಳಿ ತಪ್ಪಿಕೊಂಡಿದ್ದೆ.

ರಾಜ್ಯದಲ್ಲಿ ಕರೋನಾ ಲಸಿಕೆ ಕೊರೆತೆಯಾಗದಂತೆ ಕ್ರಮ - ಸಚಿವ ಸುಧಾಕರ್

ಇಲ್ಲಿ ಯಾರು ಹರಿಶ್ಚಂದ್ರ(Harishchandra)ರಲ್ಲ, ಸುಮ್ಮನೆ ಏಕೆ ರಾಡಿ ಎರಚಿಕೊಳ್ಳುತ್ತೀರಿ. ನೀವು ಸತ್ಯವಂತರಾದರೇ ನೀವು ಕೋರ್ಟ್ ಗೆ ಏಕೆ ತಡೆಯಾಜ್ಞೆ ತಂದಿರಿ, ನಾನು ಮಾಡಿರುವ ತಪ್ಪು ಒಪ್ಪಿಕೊಂಡಿರುವಾಗ ನನ್ನ ಹೆಸರನ್ನು ಏಕೆ ಎಳೆದು ತರುತ್ತೀರಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Video :ಬೈಯಪ್ಪನಹಳ್ಳಿಯಲ್ಲಿ ಕಾರ್ಯಾರಂಭಿಸಲಿದೆ ದೇಶದ ಮೊದಲ AC Railway Terminal

ನೀವೇ ಸಮಸ್ಯೆ ತಂದು ಬೇರೆಯವರ ಮೇಲೆ ಏಕೆ ಕೆಸರು ಹಾಕುತ್ತಿದ್ದಾರೆ. ಬೀದಿಯಲ್ಲಿ ನಿಂತು ನಗೆಪಾಟಲಿಗೀಡಾಗುತ್ತಿದ್ದಾರೆ ಎಂದ ಕುಮಾರ ಸ್ವಾಮಿ(HD Kumaraswamy), ಜನರ ಸಮಸ್ಯೆಯನ್ನು ಬಗೆಹರಿಸುವುದನ್ನು ಬಿಟ್ಟು, ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

DK Shivakumar: 'ನನಗಿರುವುದು ಒಬ್ಬಳೆ ಹೆಂಡತಿ, ಒಂದೇ ಸಂಸಾರ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More