Home> Karnataka
Advertisement

ಕಾರು-ಎಲ್‌ಪಿಜಿ ಟ್ಯಾಂಕರ್ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಮೃತರನ್ನು ಗೋವಿಂದ, ನಾಗರಾಜ್, ಗಣೇಶ್ ಮತ್ತು ಪದ್ಮಾವತಿ ಎಂದು ಗುರುತಿಸಲಾಗಿದೆ. ಎಲ್ಲರೂ ಭಟ್ಕಳದ ನಿವಾಸಿಗಳು ಎನ್ನಲಾಗಿದೆ. 

ಕಾರು-ಎಲ್‌ಪಿಜಿ ಟ್ಯಾಂಕರ್ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ, ಇಬ್ಬರಿಗೆ ಗಾಯ

ಮಂಗಳೂರು: ಇಲ್ಲಿನ ಭ್ರಮರಕೊಟ್ಲು ಟೋಲ್ ಪ್ಲಾಜಾ ಬಳಿ ಕಾರು ಮತ್ತು ಎಲ್‌ಪಿಜಿ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ಗೋವಿಂದ, ನಾಗರಾಜ್, ಗಣೇಶ್ ಮತ್ತು ಪದ್ಮಾವತಿ ಎಂದು ಗುರುತಿಸಲಾಗಿದೆ. ಎಲ್ಲರೂ ಭಟ್ಕಳದ ನಿವಾಸಿಗಳು ಎನ್ನಲಾಗಿದೆ. 

ಭಟ್ಕಳದಿಂದ ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ತೆರಳಿ, ದರ್ಶನ ಪಡೆದು ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More