Home> Karnataka
Advertisement

ಕಂದಕಕ್ಕೆ ಉರುಳಿ ಬಿದ್ದ ಕಾರು; ನಾಲ್ವರು ಸಾವು

ಕಳಸದಿಂದ ಬಾಳೆ ಹೊಳೆ ಮಾರ್ಗವಾಗಿ ಚಲಿಸುತ್ತಿದ್ದ ವ್ಯಾಗನಾರ್ ಕಾರು ಹಿರೆಬೈಲು ಗ್ರಾಮದ ಬಳಿ ಕಂದಕಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.

ಕಂದಕಕ್ಕೆ ಉರುಳಿ ಬಿದ್ದ ಕಾರು; ನಾಲ್ವರು ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು 80 ಅಡಿಯ ಕಂದಕಕ್ಕೆಉರುಳಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದಲ್ಲಿ ಸೋಮವಾರ ನಡೆದಿದೆ. 

ಕಳಸದಿಂದ ಬಾಳೆ ಹೊಳೆ ಮಾರ್ಗವಾಗಿ ಚಲಿಸುತ್ತಿದ್ದ ವ್ಯಾಗನಾರ್ ಕಾರು ಹಿರೇಬೈಲು ಗ್ರಾಮದ ಬಳಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತರನ್ನು ವಿಶ್ವನಾಥ್(55), ಪುಪ್ಪಾವತಿ(48), ರಾಹುಲ್ ರೈ(58), ಮಮತ(51) ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
 

Read More