Home> Karnataka
Advertisement

ಬಿಬಿಎಂಪಿ ಚುನಾವಣೆ ಆಗ್ರಹಿಸಿ ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿ ಸಂಗ್ರಹ ಅಭಿಯಾನ

 ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ” ಹೆಸರಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ಬೃಹತ್‌ ಸಹಿ ಸಂಗ್ರಹಕ್ಕೆ ಮುಂದಾಗಿದೆ.

ಬಿಬಿಎಂಪಿ ಚುನಾವಣೆ ಆಗ್ರಹಿಸಿ ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು  ಮುಂದೂಡಲು ಕುತಂತ್ರ ಮಾರ್ಗ ಅನುಸರಿಸುತ್ತಿದೆ ಎಂದು ಎಎಪಿ ಪಕ್ಷ ಆರೋಪಿಸಿದೆ. ಅಲ್ಲದೆ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನ  ಖಂಡಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ” ಹೆಸರಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ಬೃಹತ್‌ ಸಹಿ ಸಂಗ್ರಹಕ್ಕೆ ಮುಂದಾಗಿದೆ.

ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ್ದಾರೆ. “ಡಿಸೆಂಬರ್ 3ರಿಂದ 5ರ ತನಕ ಬೆಂಗಳೂರಿನಾದ್ಯಂತ ಮೂರು ದಿನಗಳ ಬೃಹತ್‌ ಸಹಿಸಂಗ್ರಹ ಅಭಿಯಾನ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.  ಸುಮಾರು ಐದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಡಿಸೆಂಬರ್‌ 6ರ ಮಂಗಳವಾರದಂದು ಎಎಪಿ ಮುಖಂಡರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಾದ್ಯಂತ ಸಂಗ್ರಹಿಸಿದ ಸಹಿಗಳನ್ನು ರಾಜ್ಯಪಾಲರಿಗೆ ನೀಡಿ ಸರ್ಕಾರದ ವಿರುದ್ಧ ಕ್ರಮ ಕೈಗೊಂಡು ಶೀಘ್ರ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಆಗ್ರಹಿಸುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ : ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಹೆಂಡತಿ ಒತ್ತಾಯ : ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿರಾಯ

“2020ರಲ್ಲಿ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕುಂಟುನೆಪಗಳನ್ನು ಮುಂದಿಟ್ಟುಕೊಂಡು ಮುಂದೂಡುತ್ತಲೇ ಬಂದಿದೆ. ಇದರಿಂದ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುವುದರ ಜೊತೆಗೆ ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆ ನಡೆಯುವುದಕ್ಕೆ ಪದೇಪದೇ ಅಡ್ಡಗಾಲು ಹಾಕುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದೆ ಎಂದು ಆಪಾದಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಲ್ಲಿನ ದುರಾಡಳಿತದಿಂದಾಗಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುವುದು ಶತಸಿದ್ಧ ಎಂದು ಬಿಜೆಪಿಗೆ ಮನವರಿಕೆ ಆಗಿರುವುದರಿಂದ ಬಿಜೆಪಿಯು ಚುನಾವಣೆ ಮುಂದೂಡುವ ಕುತಂತ್ರ ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.  ಇನ್ನು ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಕೂಡಾ ಈ ವಿಷಯದಲ್ಲಿ ಮೌನ ವಹಿಸಿರುವುದನ್ನು ಗಮನಿಸಿದರೆ, ಆ ಪಕ್ಷಗಳು ಕೂಡಾ ಬಿಜೆಪಿಯೊಂದಿಗೆ ಶಾಮೀಲಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮೋಹನ್‌ ದಾಸರಿ  ಆರೋಪಿಸಿದ್ದಾರೆ. 

ಇದನ್ನೂ ಓದಿ : ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಸಿಎಂ ಬೊಮ್ಮಾಯಿ

ಮೇಯರ್‌ ಹಾಗೂ ಕಾರ್ಪೊರೇಟರ್‌ಗಳು ಇಲ್ಲದ ಕಾರಣ ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. 2022-23ನೇ ವಾರ್ಡ್‌ ಮಟ್ಟದ 2,543 ಕಾಮಗಾರಿಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ 867 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಆದರೆ ಎಂಟು ತಿಂಗಳಾದರೂ ಈ ಪೈಕಿ ಕೇವಲ 76 ಕಾಮಗಾರಿಗಳು ಆರಂಭಗೊಂಡಿವೆ. ಅಧಿಕಾರಿಗಳು ನಾಮಕಾವಸ್ಥೆಗೆ ವಾರ್ಡ್‌ ಮಟ್ಟದ ಸಭೆಗಳನ್ನು ನಡೆಸುತ್ತಿದ್ದರೂ ಪ್ರಶ್ನಿಸುವವರು ಇಲ್ಲವಾಗಿದೆ ಎಂದು ಮೋಹನ್‌ ದಾಸರಿ ತಿಳಿಸಿದ್ದಾರೆ. ಕಸದ ಸಮಸ್ಯೆ, ರಸ್ತೆ ಗುಂಡಿಗಳು, ಅವ್ಯವಸ್ಥಿತ ಒಳಚರಂಡಿ, ಕೆಟ್ಟು ಹೋಗಿರುವ ವಿದ್ಯುತ್‌ ದೀಪ, ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳು ಬೆಂಗಳೂರಿನಲ್ಲಿ ತಾಂಡವವಾಡುತ್ತಿವೆ. ಇದರಿಂದಾಗಿ ನಾಗರಿಕರು ಬೆಂಗಳೂರನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಮೋಹನ್‌ ದಾಸರಿ ಬೇಸರ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More