Home> Karnataka
Advertisement

ಗುಳೇದಗುಡ್ಡ ಶೂಟ್ ಔಟ್ ಪ್ರಕರಣ : ರಕ್ತಸ್ರಾವದಿಂದ ಮಹಿಳೆ ಸಾವು

ಅಪರಿಚಿತ ವ್ಯಕ್ತಿಯೊಬ್ಬನು ಹಾರಿಸಿದ ಗುಂಡಿನ ದಾಳಿಯಿಂದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ಗುಳೇದಗುಡ್ಡದಲ್ಲಿ ನಡೆದಿದೆ.

 ಗುಳೇದಗುಡ್ಡ ಶೂಟ್ ಔಟ್ ಪ್ರಕರಣ : ರಕ್ತಸ್ರಾವದಿಂದ ಮಹಿಳೆ ಸಾವು

ಬಾಗಲಕೋಟೆ: ಅಪರಿಚಿತ ವ್ಯಕ್ತಿಯೊಬ್ಬನು ಹಾರಿಸಿದ ಗುಂಡಿನ ದಾಳಿಯಿಂದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ಗುಳೇದಗುಡ್ಡದಲ್ಲಿ ನಡೆದಿದೆ.

ಮೃತಪಟ್ಟಿರುವ ಮಹಿಳೆಯನ್ನು ದ್ಯಾಮವ್ವ ಕಕ್ಕೇರಿ(45) ಎಂದು ಗುರುತಿಸಲಾಗಿದ್ದು, ಆಕೆ ಮನೆಯ ಅಂಗಳವನ್ನು ಸ್ವಚ್ಛಗೊಳಿಸುತ್ತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವನು ಮಹಿಳೆಯ ಮೇಲೆ ಎರಡು ಗುಂಡುಗಳನ್ನು ಹಾರಿಸಿ ಪರಾರಿಯಾಗಿದ್ದಾನೆ.ಈ ಸಂದರ್ಭದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಂತ ಮಹಿಳೆಯನ್ನು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ: ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

ಈಗ ಮಹಿಳೆಯ ಕುಟುಂಬಸ್ಥರ ಪ್ರಕಾರ ಶೂಟ್ ಮಾಡಿದ ವ್ಯಕ್ತಿ ಅವರ ಸಂಬಂಧಿ ಎನ್ನಲಾಗುತ್ತಿದೆ, ಮುತ್ತು ಖಾನಾಪುರ ಎನ್ನುವ ವ್ಯಕ್ತಿ ಯೋಧನಾಗಿದ್ದು ಆತನೇ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅವರು ಶಂಕಿಸಿದ್ದಾರೆ.ಗುಂಡು ಹಾರಿಸಿದ ತಕ್ಷಣ ಅವನು ಸ್ಥಳದಿಂದ ಪರಾರಿಯಾಗಿದ್ದು, ಈ ಸಂದರ್ಭದಲ್ಲಿ ರಕ್ತಸ್ರಾವದಲ್ಲಿ ಬಿದ್ದಿದ್ದ ಮಹಿಳೆಯನ್ನು108 ಅಂಬುಲನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯು ಮೃತಪಟ್ಟಿದ್ದಾಳೆ.ಈಗ ಈ ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಇನ್ನೊಂದೆಡೆಗೆ ಬಾಗಲಕೋಟೆಯ ಎಸ್ಪಿ ಕೂಡ ಗುಳೇದಗುಡ್ಡಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೇ 11ಕ್ಕೆ ಮುಂದೂಡಿಕೆಯಾದ ಸಂಪುಟ ಸಭೆ: ಕುತೂಹಲ ಮೂಡಿಸಿದ ನಡೆ!

ಈಗ ಜಿಲ್ಲೆಯಲ್ಲಿ ನಡೆದಿರುವ ಶೂಟ್ ಔಟ್ ಪ್ರಕರಣ ಜನರಲ್ಲಿ ಆತಂಕವನ್ನು ಮೂಡಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Read More