Home> Karnataka
Advertisement

ಜೆಡಿಎಸ್‌ಗೆ ನೂತನ ಸಾರಥಿ: ಎಚ್.ಕೆ.ಕುಮಾರಸ್ವಾಮಿಗೆ ಅಧ್ಯಕ್ಷ ಪಟ್ಟ, ನಿಖಿಲ್ ಯುವ ಘಟಕದ ಅಧ್ಯಕ್ಷ

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿಯೂ, ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಜೆಡಿಎಸ್‌ಗೆ ನೂತನ ಸಾರಥಿ: ಎಚ್.ಕೆ.ಕುಮಾರಸ್ವಾಮಿಗೆ ಅಧ್ಯಕ್ಷ ಪಟ್ಟ, ನಿಖಿಲ್ ಯುವ ಘಟಕದ ಅಧ್ಯಕ್ಷ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನಿರೀಕ್ಷೆಯಂತೆ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ಗೆ ನೂತನ ಸಾರಥಿಯ ಪಟ್ಟ ನೀಡಿದ್ದಾರೆ.

ಈ ಬಗ್ಗೆ ಇಂದು ಅಧಿಕೃತವಾಗಿ ಘೋಷಿಸಿದಹೆಚ್.ಡಿ. ದೇವೇಗೌಡ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕ ಎಚ್.ಕೆ.ಕುಮಾರಸ್ವಾಮಿ ಕಾರ್ಯದರ್ಶಿಯಾಗಿ ಮಧು ಬಂಗಾರಪ್ಪ ಅವರನ್ನು ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನಗರದ ಜೆಪಿ ಭವನದಲ್ಲಿ ಜೆಡಿಎಸ್ ನೂತನ ರಾಜ್ಯ ಘಟಕದ ಅಧ್ಯಕ್ಷರ ಹೆಸರು ಘೋಷಿಸಿದ ದೇವೇಗೌಡರು, ಮೂವರಿಗೂ ಶುಭಹಾರೈಸಿದರು.

ನೂತನ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ನಿರ್ಗಮಿತ ಅಧ್ಯಕ್ಷ ಎಚ್. ವಿಶ್ವನಾಥ್ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.

Read More