Home> Karnataka
Advertisement

ಯಾವುದೇ ತಪ್ಪು ಮಾಡಿಲ್ಲ, ನನ್ನ ಹೋರಾಟ ಮುಂದುವರೆಯಲಿದೆ - ಡಿ.ಕೆ.ಶಿವಕುಮಾರ್

 ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರದಂದು ಪಕ್ಷದ ಬೆಂಬಲಿಗರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಿದರು.

ಯಾವುದೇ ತಪ್ಪು ಮಾಡಿಲ್ಲ, ನನ್ನ ಹೋರಾಟ ಮುಂದುವರೆಯಲಿದೆ - ಡಿ.ಕೆ.ಶಿವಕುಮಾರ್

ಬೆಂಗಳೂರು: ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರದಂದು ಪಕ್ಷದ ಬೆಂಬಲಿಗರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಿದರು.

ಬೆಂಗಳೂರು ಗ್ರಾಮೀಣ, ರಾಮನಗರ, ಮಂಡ್ಯ ಮತ್ತು ನೆರೆಯ ಪ್ರದೇಶಗಳ ಹಳೆಯ ಮೈಸೂರು ಪ್ರದೇಶದ ಕೆಲವು ಭಾಗಗಳಲ್ಲಿ ತಮ್ಮ ಪ್ರಭಾವ ಹೊಂದಿರುವ ಡಿಕೆಶಿ ಸ್ವಾಗತಿಸಲು ಬೆಂಬಲಿಗರು ಹೂವುಗಳು, ಪಟಾಕಿ ಮತ್ತು ಬೃಹತ್ ಸೇಬು ಹಾರದ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ಕಾಂಗ್ರೆಸ್ ಕಚೇರಿ ತಲುಪಿದ ಡಿಕೆಶಿ ತಾವು ಯಾವುದೇ ತಪ್ಪು ಮಾಡಿಲ್ಲ ತಮ್ಮ ಹೋರಾಟ ಮುಂದುವರೆಯಲಿದೆ ಎಂದು ಪುನರುಚ್ಚರಿಸಿದರು. “ನಾನು ಹಿಂತಿರುಗಿ ಹೋಗುವ ಪ್ರಶ್ನೆಯೇ ಇಲ್ಲ. ನಾನು ಏನಾದರೂ ತಪ್ಪು ಮಾಡಿದರೆ ಅವರು ನನ್ನನ್ನು ಗಲ್ಲಿಗೇರಿಸಲಿ ಅಥವಾ ಜೈಲಿಗೆ ಹಾಕಲಿ. ನಾನು ಯಾವುದೇ ಸಮಯದಲ್ಲಿ ಯಾರಿಗೂ ದ್ರೋಹ ಮಾಡಿಲ್ಲ, 'ಎಂದು ಅವರು ಹೇಳಿದರು.

“ನಾನು ಏನಾದರೂ ತಪ್ಪು ಮಾಡಿದ್ದರೆ, ದೇವರು ಮತ್ತು ಕಾನೂನು ನನ್ನನ್ನು ಶಿಕ್ಷಿಸಲಿ. ಇದಕ್ಕೆ ಕಾಲ ಮತ್ತು ಕಾನೂನು ಉತ್ತರಿಸುತ್ತದೆ. ನಾನು ಜಾಮೀನು ಪಡೆಯಲು ಅರ್ಹನಲ್ಲ ಎಂದು ಇಡಿ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಅವರು ಅದನ್ನು ಕಾನೂನು ಬದ್ಧವಾಗಿ ಮಾಡಬಹುದು. ನಾನು ವೃತ್ತಿಯಲ್ಲಿ ಉದ್ಯಮಿ ಮತ್ತು ವೃತ್ತಿಯಲ್ಲಿ ರಾಜಕಾರಣಿ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 3 ರಂದು ಜಾರಿ ನಿರ್ದೇಶನಾಲಯ ಬಂಧಿಸಿ ದೆಹಲಿ ಹೈಕೋರ್ಟ್ ನೀಡಿರುವ ಷರತ್ತುಬದ್ಧ ಜಾಮೀನಿನ ಮೇಲೆ 50 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಡಿಕೆಶಿ ಬಂಧನದ ನಂತರ ರಾಮನಗರ, ಬೆಂಗಳೂರು ಗ್ರಾಮೀಣ, ಮಂಡ್ಯ ಮತ್ತು ಹಳೆಯ ಮೈಸೂರು ಪ್ರದೇಶದ ಇತರ ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. 

Read More