Home> Karnataka
Advertisement

ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ: ಹೆಚ್.ಡಿ.ರೇವಣ್ಣ

ಮೋದಿ ಅವರು ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ಬಿಟ್ಟು ಬಿಡುತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ: ಹೆಚ್.ಡಿ.ರೇವಣ್ಣ

ಮೈಸೂರು: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ಬಿಟ್ಟು ಬಿಡುತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮಗೆ 6, 8, 22 ಅದೃಷ್ಟ ಸಂಖ್ಯೆಗಳು. 18 ಅಂದರೆ 1+8=9. ಹಾಗಾಗಿ 9 ಬಹಳ ಅದೃಷ್ಟ ಸಂಖ್ಯೆ. ಕಳೆದ ಬಾರಿ 2018ರಲ್ಲಿ ಚುನಾವಣೆ ನಡೆಯಲಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಈ ಬಾರಿ ಕೂಡ 18 ರಂದು ಮತದಾನ ಇದೆ. ಹೀಗಾಗಿ ಮೊದಲ‌ ಹಂತದ 14 ಸ್ಥಾನಗಳನ್ನು ಮೈತ್ರಿ ಅಭ್ಯರ್ಥಿಗಳ ಪಾಲಾಗಲಿದೆ. ರಾಜ್ಯದಲ್ಲಿ ಅಚ್ಚರಿ ಫಲಿತಾಂಶ ಬರುತ್ತದೆ. ಒಟ್ಟು 22 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ.  1+8 ಈಗಲೂ ಯುಪಿಎ ಅಧಿಕಾರಕ್ಕೆ ಬರಲಿದೆ ಎಂದು ರೇವಣ್ಣ ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಹಣ ದುರ್ಬಳಕೆಯಾಗಿದೆ ಎಂಬ ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡು ಬದುವ ಅಗತ್ಯ ನಮಗಿಲ್ಲ. ನನ್ನ ಇಲಾಖೆಯಲ್ಲಿ ಶೇ.5ರಷ್ಟು ಹಣ ಉಳಿಸಿದ್ದೇನೆ ಎಂದು ಹೇಳಿದರು.
 

Read More