Home> Karnataka
Advertisement

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‌ಗೆ ಲಘು ಹೃದಯಾಘಾತ

ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‌ಗೆ ಲಘು ಹೃದಯಾಘಾತ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು ಹೈದರಾಬಾದಿನ ಓಜೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು. ಬಳಿಕ ಅವರನ್ನು ಅಲ್ಲಿನ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡ ಬಳಿಕ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ರಕ್ತದೊತ್ತಡ, ಮಧುಮೇಹ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹಲವು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಬಳಿಕ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

Read More