ಕೊಪ್ಪಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೊಪ್ಪಳದ ಗಂಗಾವತಿಯಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಭತ್ತದ ನಾಡು ಗಂಗಾವತಿಗೆ ಆಗಮಿಸಲಿರುವ ಪ್ರಧಾನಿ ಮೋದಿ,
ಏಪ್ರಿಲ್ 9ರಂದು ಚಿತ್ರದುರ್ಗ, ಮೈಸೂರಿನಲ್ಲಿ ಅಬ್ಬರದ ಪ್ರಚಾರನಡೆಸಿದ್ದ ಮೋದಿ, ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಪರ ಮತಬೇಟೆ ನಡೆಸಲಿದ್ದಾರೆ. ಸುಮಾರು 30 ಎಕರೆ ಬೃಹತ್ ಪ್ರದೇಶದಲ್ಲಿ ನಡೆಯಲಿರುವ ಸಮಾವೇಷದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ.