Home> Karnataka
Advertisement

Narayana Gowda : ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದ ಸಚಿವ ನಾರಾಯಣ ಗೌಡ

ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಾಲ್ಕರಿಂದ ಐದು ಶಾಸಕರು ಹಾಗೂ ಒಂದು‌ ಸಂಸದ ಸ್ಥಾನವನ್ನು ಬಿಜೆಪಿ ಪಡೆಯಲಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದರು.

Narayana Gowda : ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದ ಸಚಿವ ನಾರಾಯಣ ಗೌಡ

ಬೆಂಗಳೂರು : ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಾಲ್ಕರಿಂದ ಐದು ಶಾಸಕರು ಹಾಗೂ ಒಂದು‌ ಸಂಸದ ಸ್ಥಾನವನ್ನು ಬಿಜೆಪಿ ಪಡೆಯಲಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಾರಾಯಣ ಗೌಡ, ನಮ್ಮ ಜೊತೆ ಯಾರು ಸಂಪರ್ಕದಲ್ಲಿ ಇದ್ದಾರೆ ಸ್ವಲ್ಪ ದಿನಗಳಲ್ಲಿ ಗೊತ್ತಾಗುತ್ತದೆ. ಸದ್ಯ ನಾವು 17 ಮಂದಿ ಬಿಜೆಪಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಮೂರರಷ್ಟು ಜನರನ್ನು ಕರೆದುಕೊಂಡು ಬರುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಕನ್ನಡತಿಯಾದ ಜರ್ಮನ್‌ ಬೆಡಗಿ: ಈಕೆಯ ಕನ್ನಡಾಭಿಮಾನಕ್ಕೆ ಫಿದಾ ಆದ ಕರುನಾಡು

ನಮ್ಮ ಜೊತೆ ಹಲವರು ಸಂಪರ್ಕದಲ್ಲಿ ಇದ್ದಾರೆ. ಹಲವರು ನಮ್ಮ ಪಕ್ಷ ಸೇರ್ಪಡೆ ಆಗುತ್ತಾರೆ.ಯಾರೆಲ್ಲ ಬರುತ್ತಾರೆ, ಎಷ್ಟು ಜನ ಬರುತ್ತಾರೆ ಅಂತ ನಾನು ಈ ಹಂತದಲ್ಲಿ ಹೇಳಲ್ಲ. ನಮ್ಮ ಪಕ್ಷ 140 ರಿಂದ 150 ಸ್ಥಾನ ಗೆದ್ದೇ ಗೆಲ್ಲುತ್ತೆ ಎಂದು ಭವಿಷ್ಯ ನುಡಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಇವರು, ಯಡಿಯೂರಪ್ಪನವರು ಬೇರೆ ಮಹನೀಯರ ಹೆಸರಿಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಕೂಡಾ ಚರ್ಚೆಯಾಗಬೇಕಿದೆ. ಹಿರಿಯರು ಮತ್ತೆ ಮನವೊಲಿಸಿದರೆ ಏರ್ ಪೋರ್ಟ್ ಗೆ ಯಡಿಯೂರಪ್ಪನವರ ಹೆಸರನ್ನೇ ಇಡುವ ಕೆಲಸ ಆಗುತ್ತದೆ. ಈ ಬಗ್ಗೆ ಮತ್ತೆ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ : Vegetable Price: ತರಕಾರಿ ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಹೀಗಿದೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More