Home> Karnataka
Advertisement

Laxmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್​ಗೆ 'ಬಿಗ್ ಶಾಕ್​' ನೀಡಲು ರಮೇಶ್​ ಜಾರಕಿಹೊಳಿ 'ಮೆಗಾ ಪ್ಲಾನ್'..!

ಈ ಬಾರಿ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ ಪಣತೊಟ್ಟು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ‌ ಸಾಧಿಸುವ ಯೋಜನೆ ರೂಪಿಸಿದ್ದಾರೆ.

Laxmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್​ಗೆ 'ಬಿಗ್ ಶಾಕ್​' ನೀಡಲು ರಮೇಶ್​ ಜಾರಕಿಹೊಳಿ 'ಮೆಗಾ ಪ್ಲಾನ್'..!

ಬೆಳಗಾವಿ: ರಾಜಕೀಯ ಬದ್ಧ ವೈರಿಗಳಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.

ಈ ಬಾರಿ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ(Ramesh Jarkiholi) ಪಣತೊಟ್ಟು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ‌ ಸಾಧಿಸುವ ಯೋಜನೆ ರೂಪಿಸಿದ್ದಾರೆ.

ಮನೆಯಲ್ಲಿ ಕಾರು ನಿಲ್ಲಿಸಲು ಜಾಗವಿಲ್ಲದಿದ್ದಾಗ ವ್ಯಕ್ತಿಯೊಬ್ಬ ಕಂಡುಕೊಂಡ ಪರಿಹಾರವೇನು ಗೊತ್ತಾ?

ಹೌದು...'ಕೈ' ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಸ್ನೇಹ ಭೋಜನ ಕೂಟ ಹೆಸರಲ್ಲಿ ಗೋಕಾಕ್ ಸಾಹುಕಾರ್ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬೆಳಗಾವಿಯ ನಾವಗೆ ಕ್ರಾಸ್ ಬಳಿಯ ಇರುವ ಗಣೇಶ್ ಭಾಗದಲ್ಲಿ ಸ್ನೇಹ ಭೋಜನ ಕೂಟ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದ ನೂತನ ಸದಸ್ಯರಿಗೆ ಸತ್ಕಾರ ಮಾಡುವ ಮೂಲಕ ಗ್ರಾಮೀಣ ಕ್ಷೇತ್ರವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಯೋಜನೆ ರೂಪಿಸಿದ್ದಾರೆ.

Radhika kumaraswamy: 'ಯಾರಾರಿ ಅದು ರಾಧಿಕಾ? ನನಗೆ ಯಾರೆಂದು ಗೊತ್ತಿಲ್ಲ'

ಬಿಜೆಪಿಯ ಯುವ ಮುಖಂಡ ಧನಂಜಯ ಜಾಧವ್​ ಅವರು ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಸತ್ಕಾರ ಸಮಾರಂಭದ ಬಳಿಕ ನೂತನ ಸದಸ್ಯರಿಗೆ ಹಾಗೂ ಕಾರ್ಯಕರ್ತರಿಗೆ ಭೋಜನ ಕೂಟ ಆಯೋಜಿಸಲಾಯಿತು.

B.S.Yediyurappa: ಅಮಿತ್ ಶಾ-ಬಿಎಸ್ ವೈ ಭೇಟಿ ಮುಕ್ತಾಯ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್?

ಈ ಮೂಲಕ ನಿಧಾನವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಹಿಡಿತ ಸಾಧಿಸಲು ಸಚಿವ ರಮೇಶ್ ಜಾರಕಿಹೊಳಿ‌ ಈ ಭೋಜನಾಕೂಟದ ಪ್ಲಾನ್ ಮಾಡಿದ್ದಾರೆಂದು ಎನ್ನಲಾಗಿದೆ.

JDS: '2023ಕ್ಕೆ ಕರ್ನಾಟಕ ಅಂದ್ರೇ 'ಜನತಾದಳ' ಅನ್ನೋ ಹಾಗೆ ಮಾಡ್ತೀವಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More