Home> Karnataka
Advertisement

Video : ತನ್ನ ಕ್ಷೇತ್ರವೇ ಮಳೆಯಲ್ಲಿ ಕೊಚ್ಚಿ ಹೋಗ್ತಿದ್ರೂ ಜನರನ್ನು ದೋಸೆ ಸವಿಯಲು ಕರೆಯುತ್ತಿರುವ ಸಂಸದ ತೇಜಸ್ವಿ ಸೂರ್ಯ

Tejaswi Surya : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Video : ತನ್ನ ಕ್ಷೇತ್ರವೇ ಮಳೆಯಲ್ಲಿ ಕೊಚ್ಚಿ ಹೋಗ್ತಿದ್ರೂ ಜನರನ್ನು ದೋಸೆ ಸವಿಯಲು ಕರೆಯುತ್ತಿರುವ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಡಾವಣೆಗಳು ಜಲಾವೃತ, ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ : ಸಿಎಂ ಬೊಮ್ಮಾಯಿ

ಸಂಸದ ತೇಜಸ್ವಿ ಸೂರ್ಯ ವಿಡಿಯೋದಲ್ಲಿ , ಪದ್ಮನಾಭ ನಗರದ ಸಾತ್ವಿ ಕಿಚನ್‌ಗೆ ಬಂದಿದ್ದೆ. ಇನ್‌ಸ್ಟಾಗ್ರಾಂನಲ್ಲಿ ದೋಸೆಯ ಫೋಟೊ ನೋಡಿ ಟೆಪ್ಟ್‌ ಆಗಿ ಇಲ್ಲಿಗೆ ಬಂದಿದ್ದು. ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ. ನೀವೂ ಬನ್ನಿ. ತಿಂದಾಗ್ಲೇನೆ ಆಸ್ವಾದನೆ ನಿಮಗೆ ಗೊತ್ತಾಗುವುದು. ಉಪ್ಪಿಟ್ಟು ಬಹಳ ಚೆನ್ನಾಗಿದೆ. ಬನ್ನಿ' ಎಂದು ಜನರನ್ನು ಆಹ್ವಾನಿಸುತ್ತಿರುವುದು ಇದೆ, ಎಂದು ಹೇಳಿದ್ದನ್ನ ಜನರು ಪ್ರಶ್ನೆ ಮಾಡಿದರು.

 

 

ಇನ್ನು ಕಾಂಗ್ರೆಸ್ ವಕ್ತಾರರಾದ ಲಾವಣ್ಯ ಬಲ್ಲಾಳ್,ಸಂಸದ ತೇಜಸ್ವಿ ಸೂರ್ಯ ಯಾವುದಾದರು ಒಂದು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆಯೇ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಅಯ್ಯೋ ದುರ್ವಿಧಿಯೇ: ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಇದನ್ನ ಹೊರೆತು ಪಡಿಸಿ ಸಾರ್ವಜನಿಕರು, ಪ್ರವಾಹ ಪರಿಸ್ಥಿತಿಯಲ್ಲಿ ಸಂಸದರು ಜವಾಬ್ದಾರಿಯಿಂದ ಜನರ ನೆರವಿಗೆ ಬರಬೇಕು ಎಂದು ಕಿವಿ ಮಾತನ್ನ ಹೇಳುವ ಜೊತೆಗೆ ಕೆಲವರು ಸಂಸದ ಸೂರ್ಯ ಅವರನ್ನ ಚೈಲ್ಡ್ ಚಪಾತಿ ಎಂದು ವ್ಯಂಗ್ಯ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More