Home> Karnataka
Advertisement

Rainfall in Karnataka : ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ್ಯಾಂತ ಭಾರಿ ಮಳೆ!

ಗಾಳಿ ಮಿಂಚು ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ವೇಗ 30-40 ವೇಗದಲ್ಲಿ ಗಾಳಿಯ ಬೀಸಲಿದೆ ಹೀಗಾಗಿ ಅಗತ್ಯ ಕ್ರಮ ಮತ್ತು ಎಚ್ಚರ ವಹಿಸುವಂತೆ ಇಲಾಖೆಯಿಂದ 20 ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳಿಗೆ ಅಲರ್ಟ್ ಸಂದೇಶ ರವಾನಿಸಿದೆ.

Rainfall in Karnataka : ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ್ಯಾಂತ ಭಾರಿ ಮಳೆ!

ಬೆಂಗಳೂರು : ಮುಂದಿನ ಮೂರು ಗಂಟೆಗಳ ಕಾಲ ರಾಜ್ಯದ್ಯಾಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗಾಳಿ ಮಿಂಚು ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ವೇಗ 30-40 ವೇಗದಲ್ಲಿ ಗಾಳಿಯ ಬೀಸಲಿದೆ ಹೀಗಾಗಿ ಅಗತ್ಯ ಕ್ರಮ ಮತ್ತು ಎಚ್ಚರ ವಹಿಸುವಂತೆ ಇಲಾಖೆಯಿಂದ 20 ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳಿಗೆ ಅಲರ್ಟ್ ಸಂದೇಶ ರವಾನಿಸಿದೆ. 

ಇದನ್ನೂ ಓದಿ : ಕೋಡಿಬಿದ್ದ ಕೆರೆಯಲ್ಲಿ ಮೀನಿಗೆ ಮುಗಿಬಿದ್ದ ಜನ...!

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು , ಹಾಸನ,  ಚಿತ್ರದುರ್ಗ, ತುಮಕೂರು ಬೆಂಗಳೂರು ನಗರ, ಗ್ರಾಮಾಂತರ ,ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಗುಲ್ಬರ್ಗ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. 

ಶ್ರೀ ವರಮಹಾಲಕ್ಷ್ಮಿ ಹಬ್ಬಕ್ಕೆ ವರುಣನ ಅಡ್ಡಿಯಾಗಲಿದೆ. ಬೆಂಗಳೂರಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಹಬ್ಬದ ದಿನವೂ ಮಳೆ ಆಗುವ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆ 8.30ರವರೆಗೆ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಟ 29 ಡಿಗ್ರಿ, ಕನಿಷ್ಟ 20 ಡಿಗ್ರಿ ತಾಪಮಾನವಿರಲಿದೆ. ಅಲ್ಲದೆ, ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಇರಲಿದೆ. ಹೀಗಾಗಿ, ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡ್ಲಗಿದೆ ಎಂದು ಹವಾಮಾನ ಇಲಾಖೆ ಮಾಹಿತಿತಿ ನೀಡಿದೆ.

ಇದನ್ನೂ ಓದಿ : Baburao Chinchansur : ವಿಧಾನ ಪರಿಷತ್ ಸ್ಥಾನ ಬಿಜೆಪಿ ಪಾಲು : ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More