Home> Karnataka
Advertisement

Janardhana Reddy: ನಾವು 30 ಕ್ಷೇತ್ರಗಳಲ್ಲಿ ಗೆಲುತ್ತೇವೆ : ಜನಾರ್ದನ ರೆಡ್ಡಿ

Janardhana Reddy:  ಯಾರನ್ನೋ ಸೋಲಿಸಲು ನಾನು ಪಕ್ಷ ಕಟ್ಟಿಲ್ಲ, ಗೆಲ್ಲುವ ಕಡೆಗಳಲ್ಲಿ ಮಾತ್ರ ಹೆಜ್ಜೆ ಇಡ್ತಿದ್ದೇನೆ. ಗೆಲ್ಲುವ ಕಡೆಗಳಲ್ಲಿ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡ್ತೀನಿ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 

Janardhana Reddy: ನಾವು 30 ಕ್ಷೇತ್ರಗಳಲ್ಲಿ ಗೆಲುತ್ತೇವೆ : ಜನಾರ್ದನ ರೆಡ್ಡಿ

ವಿಜಯಪುರ : ಯಾರನ್ನೋ ಸೋಲಿಸಲು ನಾನು ಪಕ್ಷ ಕಟ್ಟಿಲ್ಲ, ಗೆಲ್ಲುವ ಕಡೆಗಳಲ್ಲಿ ಮಾತ್ರ ಹೆಜ್ಜೆ ಇಡ್ತಿದ್ದೇನೆ. ಗೆಲ್ಲುವ ಕಡೆಗಳಲ್ಲಿ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡ್ತೀನಿ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 

 ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ಕಾಂಗ್ರೆಸ್ ಬಿ ಟೀಂ ಆರೋಪ ಮಾಡಿರುವ  ವಿಚಾರವಾಗಿ  ಪ್ರತಿಕ್ರಿಯಿಸಿರುವ ರೆಡ್ಡಿ, ಜನರಿಗೆ ಯಾರ ಮೇಲೆ ನಂಬಿಕೆ‌ ಇದೆ ಅವರಿಗೆ ಮತ ಹಾಕ್ತಾರೆ ಎಂದು ಪ್ರಶ್ನಿಸಿದ್ದಾರೆ. 
ಇದನ್ನೂ ಓದಿ: Amit Shah: ಲೋಕಾಯುಕ್ತ ದಾಳಿ ಹಿನ್ನಲೆ  ಹೊನ್ನಾಳಿಯ  ಅಮಿತ್ ಶಾ ಕಾರ್ಯಕ್ರಮ ಮುಂದೂಡಿಕೆ

ವಿಜಯೇಂದ್ರ ಕಣಕ್ಕಿಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಎದುರಾಳಿ ಯಾರು ಅನ್ನೋದನ್ನ ನಾನು ಯೋಚನೆ ಮಾಡೋನಲ್ಲ. ನನ್ನ ಕೆಲಸ, ನನ್ನ ಹೋರಾಟ ಇದ್ದೆ ಇರುತ್ತೆ. ನಾವು 30 ಕ್ಷೇತ್ರಗಳಲ್ಲಿ ಗೆಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. 

ಮರಳಿ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಮಾತನಾಡಿದ ಜನಾರ್ದನ ರೆಡ್ಡಿ, ಮುಂದೆ ಇಟ್ಟ ಹೆಜ್ಜೆ ಹಿಂದೆ ತೆಗೆಯೊಲ್ಲ ಮುಂದೆ ಇಟ್ಟ ಹೆಜ್ಜೆ ಹಿಂದೆ ತೆಗೆಯುವವನು ಶೂರನು ಅಲ್ಲ, ಧೀರನು ಅಲ್ಲ ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷ ಸೇರ್ಪಡೆ ಕುರಿತು   ಸ್ಪಷ್ಟನೆ ನೀಡಿದ್ದಾರೆ

ಇದನ್ನೂ ಓದಿ: ಸಿಲಿಂಡರ್ ಸ್ಫೋಟʼ : 13 ವರ್ಷದ ಬಾಲಕನ ದಾರುಣ ಸಾವು...!

ಬಿಜೆಪಿ ಶಾಸಕ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮಾಡಾಳ್ ವಿಚಾರ ಏನಾಗಿದೆ ನಿಮಗೆಲ್ಲ ಗೊತ್ತೆ ಇದೆಯಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Read More