Home> Karnataka
Advertisement

ಸದನ ಪ್ರಾರಂಭಕ್ಕಿಂತಲೂ ಮೊದಲೇ ವರಿಷ್ಠರಿಂದ ವಿಪಕ್ಷ ನಾಯಕನ ಘೋಷಣೆ: ಬಿಜೆಪಿ

BJP vs Congress: ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲವೆಂದು ಬಿಜೆಪಿ ಕುಟುಕಿದೆ.

ಸದನ ಪ್ರಾರಂಭಕ್ಕಿಂತಲೂ ಮೊದಲೇ ವರಿಷ್ಠರಿಂದ ವಿಪಕ್ಷ ನಾಯಕನ ಘೋಷಣೆ: ಬಿಜೆಪಿ

ಬೆಂಗಳೂರು: ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೇ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ವಿಧಾನಸಭಾ ಚುನಾವಣೆ ಮುಗಿದು 45 ದಿನಗಳ ಮೇಲಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ವಿಚಾರವಾಗಿ ಕಾಂಗ್ರೆಸ್ ನಿರಂತರವಾಗಿ ಬಿಜೆಪಿಯನ್ನು ಕೆಣಕುತ್ತಿದ್ದು, ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆಂದು ಟೀಕಿಸುತ್ತಿದೆ.  

ಇದೇ ವಿಚಾರವಾಗಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ’ವೆಂದು ಕುಟುಕಿದೆ.

ಇದನ್ನೂ ಓದಿ: ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: 04 ಬಾಲಕಾರ್ಮಿಕರ ರಕ್ಷಣೆ

‘ಇಷ್ಟಕ್ಕೂ ಹೊಸದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸಿದ್ದರಾಮಯ್ಯನವರು 2008ರಲ್ಲಿ ಅಂದಿನ ವಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೊರೆತ ಕಾರಣ, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಆ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿದಾಗಲೂ, ಆ ಶಾಸಕರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

‘ಕಾರ್ಯಕ್ರಮವೊಂದರ ನಿಮಿತ್ತ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಜೊತೆ ಸಿದ್ದರಾಮಯ್ಯರವರು ಒಟ್ಟಿಗೆ ಪ್ರಯಾಣಿಸಿದ್ದರು. ಆ ಸಂಧರ್ಭವನ್ನು ತಮಗೆ ಲಾಭವಾಗುವ ಹಾಗೆ ಸುದ್ದಿ ಹಬ್ಬಿಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಬೆದರಿಸಿದ್ದರು. ಬೆದರಿಕೆಗೆ ಬಗ್ಗಿದ ಹೈಕಮಾಂಡ್ ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯರಿಗೆ ವಿಪಕ್ಷ ನಾಯಕ ಸ್ಥಾನ ನೀಡಿತ್ತು’ ಎಂದು ಬಿಜೆಪಿ ಕಾಂಗ್ರೆಸ್‍ಗೆ ನೆನಪಿಸಿದೆ.

‘ಈ ಬೆಳವಣಿಗೆಯನ್ನು ಕಟುವಾಗಿ ಟೀಕಿಸಿದ್ದ ವಿರೋಧ ಪಕ್ಷದ ನಿರ್ಗಮಿತ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ‘10 ಜನ ಶಾಸಕರೊಂದಿಗೆ ಬಂದ ಸಿದ್ದರಾಮಯ್ಯ, ಈಗ 100 ಶಾಸಕರ ಮುಖ್ಯಸ್ಥರಾಗಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಎಲ್ಲಾ ಘಟನೆಗಳನ್ನು ಕಾಂಗ್ರೆಸ್ ಮರೆತಂತೆ ಕಾಣುತ್ತಿದೆ. ಚಿಂತಿಸಬೇಡಿ ಕೆಲವೇ ದಿನಗಳಲ್ಲಿ ಈ ಘಟನೆಗಳು ಮತ್ತಷ್ಟು ವಿಭಿನ್ನವಾಗಿ ಪುನರಾವರ್ತನೆಯಾಗಲಿವೆ’ ಎಂದು ಬಿಜೆಪಿ ಕುಟುಕಿದೆ.

ಇದನ್ನೂ ಓದಿ: ಕಾಂತಿ ಕಣ್ಮುಚ್ಚಿ ಕಣ್ಣೀರು ತರಿಸಿದಳು...!  ಇದು ಗ್ಯಾಂಗ್ ಲೀಡರ್ ಕಾಂತಿಯ ಇನ್‌ಸೈಡ್ ಕಹಾನಿ..

‘ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೇ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು, ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ದವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರಕಾರಕ್ಕೆ ಸಲಹೆ ನೀಡಲಿ’ ಎಂದು ಬಿಜೆಪಿ ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More