Home> Karnataka
Advertisement

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮೋಹನ್ ನಾಗಮ್ಮನವರ ನಿಧನ

ಮೂಲತಃ ಹಾವೇರಿ ಜಿಲ್ಲೆಯವರಾದ ಮೋಹನ್ ಅವರು, ಕರ್ನಾಟಕ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದಿದ್ದರು. 

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮೋಹನ್ ನಾಗಮ್ಮನವರ ನಿಧನ

ಧಾರವಾಡ: ರಾಜೋತ್ಸವ ಪ್ರಶಸ್ತಿ ವಿಜೇತ ಹೀಯ ಸಾಹಿತಿ, ಪತ್ರಕರ್ತ ಮೋಹನ್ ನಾಗಮ್ಮನವರ ಅವರು ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ನಗರದ SDM ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇವರಿಗೆ 56 ವರ್ಷ ವಯಸ್ಸಾಗಿತ್ತು.

ಮೂಲತಃ ಹಾವೇರಿ ಜಿಲ್ಲೆಯವರಾದ ಮೋಹನ್ ಅವರು, ಕರ್ನಾಟಕ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದಿದ್ದರು. ಇವರು ವಿದ್ಯಾರ್ಥಿಯಾಗಿದ್ದಾಗಲೇ ಗೋಕಾಕ ಚಳವಳಿ, ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ವಿವಿಧ ಕಥಾಸಂಕಲನಗಳು, ಕವನ ಸಂಕಲನ ಹಾಗೂ ಲೇಖನಗಳನ್ನು ಬರೆದಿದ್ದ ಇವರಿಗೆ 2011ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.
 

Read More