Home> Karnataka
Advertisement

Ramesh Jarkiholi: ಸಾಹುಕಾರನ ರಾಸಲೀಲೆ: ವಿಡಿಯೋ ಶೂಟ್ ಆಗಿದ್ದು ದೆಹಲಿಯ ಕರ್ನಾಟಕ ಭವನದಲ್ಲಿ!

ಕೃತ್ಯಕ್ಕೆ ದೆಹಲಿಯ ಕರ್ನಾಟಕ ಭವನವನ್ನು ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದು, ಕಾಮದಾಟದ ವೀಡಿಯೋ ಇದೀಗ ವೈರಲ್ ಆಗಿದೆ.

Ramesh Jarkiholi: ಸಾಹುಕಾರನ ರಾಸಲೀಲೆ: ವಿಡಿಯೋ ಶೂಟ್ ಆಗಿದ್ದು ದೆಹಲಿಯ ಕರ್ನಾಟಕ ಭವನದಲ್ಲಿ!

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲೈಂಗಿಕ ಚಟ ತೀರಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೃತ್ಯಕ್ಕೆ ದೆಹಲಿಯ ಕರ್ನಾಟಕ ಭವನವನ್ನು ರಮೇಶ್ ಜಾರಕಿಹೊಳಿ ಬಳಸಿಕೊಂಡಿದ್ದು, ಕಾಮದಾಟದ ವೀಡಿಯೋ ಇದೀಗ ವೈರಲ್ ಆಗಿದೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ(Video Shoot) ಮಾಡಲು ಬಯಸಿದ್ದ ಯುವತಿ ಸಹಾಯಕ್ಕೆಂದು ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡು ಜಾರಕಿಹೊಳಿ ಲೈಂಗಿಕ ತೃಷೆ ತೀರಿಸಿಕೊಂಡಿದ್ದಾರೆ ಎಂದು ದೂರುದಾರ ದಿನೇಶ್ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರಿನ ಜೊತೆ ಸಿಡಿ ನೀಡಿದ್ದಾರೆ.

Ramesh Jarkiholi: ಸಾಹುಕಾರ್ ನ ರಾಸಲೀಲೆ ವಿಡಿಯೋ: ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ?

ನಾಳೆ ಮಧ್ಯಾಹ್ನ 2ಕ್ಕೆ ಸಿಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಗೆ ರಮೇಶ್ ಜಾರಕಿಹೊಳಿ(Ramesh Jarkiholi) ಬರ್ತಾರಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಸಂಪುಟ ಸಭೆಯಲ್ಲೂ ಸಾಹುಕಾರ್ ರಾಸಲೀಲೆಯದ್ದೇ ಚರ್ಚೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಂಪುಟ ಸಚಿವರು ಭಾರೀ ಮುಜುಗರಕ್ಕೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸಂಪುಟ ಸಚಿವರು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ.

CD Release: ರಮೇಶ್​ ಜಾರಕಿಹೊಳಿ ನಂತ್ರ ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ರಿಲೀಸ್​!?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More