Home> Karnataka
Advertisement

"ಸಂತೋಷ್ ಆತ್ಮಹತ್ಯೆ ಹಿಂದಿನ ಕಿಂಗ್‌ಪಿನ್ ಡಿಕೆಶಿ ಏಕೆ ಆಗಿರಬಾರದು?"

ಏಪ್ರಿಲ್‌ 12 ರಂದು "ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ" ಎಂದು ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಚಿಕ್ಕಮಗಳೂರು: "ಸಂತೋಷ್ ಆತ್ಮಹತ್ಯೆ ಪ್ರಕರಣದ ಹಿಂದಿರುವ ಕಿಂಗ್‌ಪಿನ್ ಡಿ‌.ಕೆ ಶಿವಕುಮಾರ್ ಏಕೆ ಆಗಿರಬಾರದು?" ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಪ್ರಶ್ನಿಸಿದ್ದಾರೆ. 

ಇದನ್ನು ಓದಿ: ಅದ್ಭುತ ಲಾಭಗಳನ್ನೊಳಗೊಂಡ ಈ ಯೋಜನೆಯಿಂದ Jio-Airtel ಗೆ ಭಾರಿ ಪೈಪೋಟಿ

ಸಚಿವ ಕೆ.ಎಸ್‌ ಈಶ್ವರಪ್ಪರನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರವನ್ನು ಕಾಂಗ್ರೆಸ್ ರೂಪಿಸಿದೆ. ಈ ಹಿಂದೆ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲೂ ಡಿಕೆ ಶಿವಕುಮಾರ್‌ ಅವರ ಕೈವಾಡವಿತ್ತು. ಹೆಣ್ಣನ್ನು ಬಳಸಿಕೊಂಡು ರಮೇಶ್‌ ಜಾರಕಿಹೊಳಿಯವರ ರಾಜೀನಾಮೆಯನ್ನು ಪಡೆದರು. ಹತಾಶೆಯಿಂದ ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್‌ ಮತ್ತು ಡಿ.ಕೆ. ಶಿವಕುಮಾರ್‌ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಇದನ್ನು ಓದಿ: KGF 2 ಹವಾ: ಇದ್ದಿಲು-ಮರಳಲ್ಲಿ ಮೂಡಿತು ʼರಾಕಿಭಾಯ್‌ ಪೋಸ್ಟರ್‌ʼ

ಏಪ್ರಿಲ್‌ 12 ರಂದು "ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ" ಎಂದು ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಿ ಬೆಳಗಾವಿಯ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಳಿಕ ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಕಾಳಿಮಠದ ಋಷಿಕುಮಾರ ಸ್ವಾಮೀಜಿ ಈ ಹೇಳಿಕೆಯನ್ನು ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More