Home> Karnataka
Advertisement

 BS Yediyurappa : 'ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ ಮಾಡ್ತೇನೆ'

ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿಮೀರಿ ಕೆಲಸ ಮಾಡ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

 BS Yediyurappa : 'ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ ಮಾಡ್ತೇನೆ'

ಬೆಂಗಳೂರು : ಅಧಿಕಾರ ಇಲ್ಲದೆ ಇದ್ರೂ ಸಹ ಜ‌ನ ಆಶೀರ್ವಾದ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಕಾಂಗ್ರೆಸ್ ನವರ ಯಾವುದೇ ಬೂಟಾಟಿಕೆ ನಡೆಯೋದಿಲ್ಲ. ಬಿಜೆಪಿ ಅಧಿಕಾರಕ್ಕೆ ತರಲು ಶಕ್ತಿಮೀರಿ ಕೆಲಸ ಮಾಡ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ತಮ್ಮ ನಿವಾಸ ಕಾವೇರಿ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು(BS Yediyurappa), ಜನ ಮುಂದಿನ ಚುನಾವಣೆಯಲ್ಲಿ ನಮಗೆ ಜನ ಆಶೀರ್ವಾದ ಮಾಡುತ್ತಾರೆ. ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ ಮಾಡ್ತೇನೆ ಎಂದು ಹೇಳಿದರು.

ಇದನ್ನೂ ಓದಿ : Operation Ganga: ಯುದ್ಧಪೀಡಿತ ಉಕ್ರೇನ್‌ನಿಂದ ಬೆಂಗಳೂರಿಗೆ ಆಗಮಿಸಿದ 12 ಜನ ವಿದ್ಯಾರ್ಥಿಗಳು

ನಂತರ ರಷ್ಯಾ - ಉಕ್ರೇನ್(Ukraine Russia War) ಮಧ್ಯೆ ಯುದ್ಧ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ, ಭಾರತೀಯರನ್ನ ಕರೆತರುವ ಎಲ್ಲ ರೀತಿಯ ಪ್ರಯತ್ನ ನಡೀತಿದೆ. ಉಕ್ರೇನ್ ನಿಂದ ಎಲ್ಲ ವಿದ್ಯಾರ್ಥಿಗಳು ವಾಪಸ್ ಬರುತ್ತಿದ್ದಾರೆ.  ಯಾರೂ ಗಾಬರಿ ಪಡಬೇಡಿ, ತೊಂದರೆ ಆಗದಂತೆ ಕರೆತರುತ್ತೇವೆ. ಮೋದಿ ಜೀ ಅವರು ಎಲ್ಲ ರೀತಿಯ ಸಹಕಾರ ಕೊಡ್ತಿದ್ದಾರೆ. ಯಾರೂ ಅತಂಕ ಪಡೆದೆ ಬಾಗರಿ ಪಡದೆ ಇರಲು ಮನವಿ ಮಾಡ್ತೇನೆ. ಪೋಷಕರು ಯಾವುದೇ ರೀತಿ ಆತಂಕ ಪಡಬೇಡಿ. ಉಕ್ರೇನ್ ನಲ್ಲಿ ಉಳಿದ ಭಾರತೀಯರು ಕೂಡಾ ಗಾಬರಿ ಪಡಬೇಡಿ. ಮೋದಿ ಜೀ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಈಗಾಗಲೇ 219 ವಿದ್ಯಾರ್ಥಿಗಳು ತಾಯಿ ನಾಡಿ ವಾಪಸ್ ಬಂದಿದ್ದಾರೆ. ಉಕ್ರೇನ್ ನಲ್ಲಿರುವ ಕನ್ನಡಿಗರನ್ನ ಕರೆತರಲು ರಾಜ್ಯ ಸರ್ಕಾರ ಕೂಡ ಶಕ್ತಿ ಮೀರಿ ಕೆಲಸ ಮಾಡ್ತಿದೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More