Home> Karnataka
Advertisement

ಸುಮಲತಾ ಪರ ಪ್ರಚಾರ: ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ

ಗುರುವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯಲ್ಲಿ ಸುಮಲತಾ ಪರ ಪರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸುಮಲತಾ ಪರ ಪ್ರಚಾರ: ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿದ್ದ ಅಂತ ದರ್ಶನ್ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಗುರುವಾರ ರಾತ್ರಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯಲ್ಲಿ ಸುಮಲತಾ ಪರ ಪರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ದರ್ಶನ್ ಗೆ ಭದ್ರತೆ ಒದಗಿಸುತ್ತಿದ್ದ ಪೋಲೀಸರ ಕಾರಿನ ಮೇಲೂ ಕಲ್ಲುಗಳು ಬಿದ್ದಿವೆ. ಅದೃಷ್ಟವಶಾತ್ ದರ್ಶನ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಲದಿನಗಳ ಹಿಂದೆ ಸುಮಲತಾ ಪರ ಪ್ರಚಾರ ನಡೆಸಲು ಮುಂದಾದ ಕಾರಣಕ್ಕಾಗಿ ದರ್ಶನ್ ಮನೆ ಮೇಲೆ ಕಲ್ಲುತೂರಾಟ ನಡೆದಿತ್ತು. ಮಂಡ್ಯ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಸುಮಲತಾ-ನಿಖಿಲ್ ಕುಮಾರಸ್ವಾಮಿ ನಡುವೆ ಚುನಾವಣೆಯಲ್ಲಿ ಭಾರೀ ಪೈಪೋಟಿ ನಡೆಯಲಿದೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 18ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರಬೀಳಲಿದೆ.

Read More