Home> Karnataka
Advertisement

ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯ ಕಾರ್ಯದರ್ಶಿ ಕೂಡಲೇ ಇಬ್ಬರನ್ನು ಕರೆದು ಎಚ್ಚರಿಕೆ ನೀಡಬೇಕು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.

ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು: ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳ ಜಟಾಪಟಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಮುಖ್ಯ ಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳ ಮೇಲೆ ಚಾಟಿ ಬೀಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯ ಕಾರ್ಯದರ್ಶಿ ಕೂಡಲೇ ಇಬ್ಬರನ್ನು ಕರೆದು ಎಚ್ಚರಿಕೆ ನೀಡಬೇಕು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.

ಇದನ್ನೂ ಓದಿ: ಐಎಎಸ್‌ Vs ಐಪಿಎಸ್‌ ವಾರ್‌ : 8 ವರ್ಷಗಳ ನಂತರ ಡಿಕೆ ರವಿ ಸಾವಿನ ಸುದ್ದಿ ಕೆದಕಿದ್ಯಾಕೆ..!

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ದೇವಮಾನವರು ಎಂದು ಕರೆದಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಇದರಿಂದ ಜನತೆಗೆ ಯಾವ ಸಂದೇಶ ಕೊಡುತ್ತಿದ್ದಾರೆ ಅವರು ಎಂದು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಸರಕಾರ ಇಲ್ಲದ ಶೂನ್ಯ ಸ್ಥಿತಿ ಇದೆ ಎನ್ನುವ ಭಾವನೆ ಬರುತ್ತಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ನಾನು ಕೂಡ ಸರಕಾರವನ್ನು ನಡೆಸಿದ್ದೇನೆ. ಆಗೆಲ್ಲ ಹೀಗೆ ಆಗಲು ಬಿಟ್ಟಿರಲಿಲ್ಲ ಎಂದರು.

ಅಧಿಕಾರಿಗಳಿಗೆ ಒಂದಿಷ್ಟು ಮಾರ್ಗಸೂಚಿಗಳು, ನಿಯಮಾವಳಿಗಳು ಇವೆ. ಅವರು ಜನತೆಗೆ ಉತ್ತರದಾಯಿ ಆಗಿರಬೇಕು. ಅವರು ಸೋಷಿಯಲ್ ಮೀಡಿಯಾದಲ್ಲಿ ಹಾದಿ ರಂಪ ಬೀದಿ ರಂಪ ಮಾಡಿಕೊಳ್ಳುವ ಬದಲು ಮುಖ್ಯ ಕಾರ್ಯದರ್ಶಿ ಬಳಿ ಹೋಗಿ ಸಮಸ್ಯೆ ಪರಿಹಾರ ಮಾಡಿಕೊಳ್ಳಬಹುದಿತ್ತು. ಇದೊಂದೇ ಅಲ್ಲ, ಅನೇಕ ಪ್ರಕರಣಗಳು ನಡೆದಿವೆ. ಅಧಿಕಾರಿಗಳಿಗೆ ಸರ್ಕಾರದ ಮೇಲೆ ಗೌರವ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗೃಹ ಸಚಿವರು ಸರಕಾರಿ ಅಧಿಕಾರಿಗಳನ್ನು ದೇವಮಾನವರು ಅಂತಾರೆ. ಹಾಗೆಂದರೆ ಏನರ್ಥ? ಅವರೇನು ಇಂದ್ರಲೋಕದಿಂದ ಇಳಿದು ಬಂದವರಾ? ಇದೆಲ್ಲಾ ವಿಚಾರಗಳು ನನಗೆ ಗೊತ್ತಿದೆ. ಸಾರಾ ಮಹೇಶ್ ಅವರ ಮೇಲೆ ಒಬ್ಬ ಮಹಿಳಾ ಅಧಿಕಾರಿ ಆರೋಪ ಮಾಡಿದ್ದು ಗೊತ್ತಿದೆ, ಆ ಅಧಿಕಾರಿ ಎಲ್ಲಿ ಹೋದರೂ ವಿವಾದವೇ. ಯಾಕೆ ಬೇಕು ಇಂಥ ವಿವಾದಗಳು? ನನಗೆ ಗೊತ್ತಿರುವ ಕೆಲ ಮಾಹಿತಿಗಳನ್ನು ಹೊರಗೆ ಇಟ್ಟರೆ ಸರಕಾರಕ್ಕೆ ತಲೆ ಎತ್ತಿ ನಿಲ್ಲಲು ಆಗುವುದಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸಾರಾ ಮಹೇಶ್ ಅವರು ಆ ಮಹಿಳಾ ಅಧಿಕಾರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಿದಾಗ, ಆ ಅಧಿಕಾರಿಯ ಪರವಾಗಿ ಯಾರೆಲ್ಲ, ಹೇಗೆಲ್ಲಾ ಒತ್ತಡ ಹಾಕಿದರು, ಎಂತೆಂಥ ಹುದೆಯಲ್ಲಿದ್ದವರು ಪ್ರಭಾವ ಬೀರಿದರು ಎನ್ನುವುದು ನನಗೆ ಗೊತ್ತಿದೆ. ಕೊನೆಗೆ ನಾನೇ ಸಾರಾ ಮಹೇಶ್ ಅವರಿಗೆ, ಹೋಗಲಿ.. ಬಿಟ್ಟು ಬಿಡಿ ಎಂದು ಹೇಳಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡಬಲ್ ಎಂಜಿನ್ ಸರಕಾರದಲ್ಲಿ ಇದೆಲ್ಲಾ ಎಗ್ಗಿಲ್ಲದೆ ನಡೆಯುತ್ತಿದೆ. ಒಂದೆಡೆ ರಾಜ್ಯದಿಂದ ಕೈಗಾರಿಕೆಗಳು ಬೇರೆ ರಾಜ್ಯದ ಪಾಲಾಗುತ್ತಿವೆ. ಇಲ್ಲಿ ನೋಡಿದರೆ ಅಧಿಕಾರಿಗಳು ಕಿತ್ರಾಡಿಕೊಳ್ಳುತ್ತಿದ್ದಾರೆ. ಎಲೆಕ್ಟ್ರಿಕ್ ಬಸ್ ಯೋಜನೆ ಎಲ್ಲಿಗೆ ಹೋಯ್ತು? ತಮಿಳುನಾಡಿಗೆ ಹೋಗಿದೆ ಅದು. ಸರಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ ಎಂದು ಅವರು ಕಿಡಿ ಕಾರಿದರು.

ಎ.ಟಿ.ರಾಮಸ್ವಾಮಿ ಮಾತು ಸರಿ ಇಲ್ಲ:

ಹಾಸನದ ರಾಜಕೀಯಕ್ಕೆ ಸಂಬಂಧಿಸಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಬಗ್ಗೆ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ ಅವರು ಬಳಕೆ ಮಾಡಿರುವ ಪದ ಸರಿ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ: ರೋಹಿಣಿ ಸಿಂಧೂರಿ, ಡಿ ರೂಪಾ ಇಡೀ ಅಧಿಕಾರಿ ವರ್ಗಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ..!

ಎರಡು ಮೂರು ವರ್ಷದಿಂದ ರಾಮಸ್ವಾಮಿ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಲ್ಲ, ಯಾವ ಸಭೆಗಳಿಗೆ ಕೂಡ ಬಂದಿಲ್ಲ. ಎರಡು ವರ್ಷದಿಂದಲೇ ಅನೇಕರು ಬೇರೆ ಪಕ್ಷದ ಜತೆ ಸಂಪರ್ಕದಲ್ಲಿ ಇದ್ದರು. ಅರಕಲಗೂಡಿನ ರಾಜಕಾರಣ ಹೇಗಾಯ್ತು, ಯಾಕೆ ಹೀಗಾಯ್ತು ಅಂತ ನನಗಿಂತ ರಾಮಸ್ವಾಮಿ ಅವರಿಗೇ ಚೆನ್ನಾಗಿ ಗೊತ್ತಿದೆ. ಅವರು ನಾನು ಹಿಂದೆ ನೀಡಿದ್ದ ಮಹತ್ವದ ಹೊಣೆಯನ್ನು ಬಹಳ ಉತ್ತಮವಾಗಿ ನಿಭಾಯಿಸಿದ್ದರು. ಅಂತವರು ರೇವಣ್ಣ ಅವರನ್ನು ರಾವಣ ಎಂದು ಕರೆಯಬಾರದಿತ್ತು ಎಂದರು ಮಾಜಿ ಮುಖ್ಯಮಂತ್ರಿ ಅವರು.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More