Home> Karnataka
Advertisement

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ನೋಡಲು ಆಸ್ಪತ್ರೆಗೆ ನಟ ಯಶ್ ಭೇಟಿ

ನೆಚ್ಚಿನ ನಟನ ಹುಟ್ಟು ಹಬ್ಬದ ದಿನ ಅವರನ್ನು ನೋಡಲಾಗದ ಹಿನ್ನೆಲೆಯಲ್ಲಿ ಯಶ್ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ.

ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ನೋಡಲು ಆಸ್ಪತ್ರೆಗೆ ನಟ ಯಶ್ ಭೇಟಿ

ಬೆಂಗಳೂರು: ನೆಚ್ಚಿನ ನಟನ ಯಶ್ ಹುಟ್ಟು ಹಬ್ಬದ ದಿನ ಅವರನ್ನು ನೋಡಲಾಗದ ಹಿನ್ನೆಲೆಯಲ್ಲಿ ಯಶ್ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ. ಅಭಿಮಾನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯಶ್ ಆಸ್ಪತ್ರೆಗೆ ಭೇಟಿ ನೀಡಿದರು. 

ಮಂಗಳವಾರ ಸಂಜೆ ಯಶ್ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ರವಿ ಅವರ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿಯಲ್ಲಿಯೇ ರವಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಯಶ್‌ ನೋಡಲು ನೆಲಮಂಗಲ ತಾಲೂಕಿನ ಶಾಂತಿನಗರದ ನಿವಾಸಿ ರವಿ ಹೊಸಕೆರೆಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಯಶ್ ನೋಡಲು ಸಿಗಲಿಲ್ಲ. ಇದರಿಂದ ಬೇಸರಗೊಂಡ ವ್ಯಕ್ತಿ ಯಶ್ ಮನೆ ಎದುರೇ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಗಾಯಗೊಂಡ ಅಭಿಮಾನಿ ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಅವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ನಟ ಯಶ್, 'ಘಟನೆ ನಡೆದಾಗ ನಾನು ಮನೆಯಲ್ಲಿ ಇರಲಿಲ್ಲ. ಹುಟ್ಟು ಹಬ್ಬ ಆಚರಣೆ ಮಾಡುವುದಿಲ್ಲ ಎಂದು ಮೊದಲೇ ಹೇಳಿದ್ದೆ. ಸ್ವಲ್ಪ ಹೊತ್ತಿನ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದೆ' ಎಂದು ಹೇಳಿದರು.
 

Read More