ar: ಈ ಹಸಿರು ತರಕಾರಿಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆದರೆ ಇದನ್ನು ಆಹಾರದಲ್ಲಿ ಹೇಗೆ ಸೇರಿಸ...
ಮಧುಮೇಹ ಇದ್ದಾದ ಔಷಧಿಗಳನ್ನು ತಪ್ಪದೆ ತೆಗೆದುಕೊಳಬೇಕು, ಪಥ್ಯ ಮಾಡಬೇಕು ಎಂದೆಲ್ಲಾ ಹೇಳುತ್ತಾರೆ.ಆದರೆ ಕೆಲವು ಮನೆಮದ್ದುಗಳನ್ನು ಮಾಡುವ ಮೂಲಕ ಈ ಕಾಯಿಲೆಯನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ನಾವಿಲ್ಲಿ ತೊಂಡೆಕಾಯಿ ಬಗ್ಗೆ ಹೇಳುತ್ತಿದ್ದೇವೆ.ತೊಂಡೆಕಾಯಿ ನೋಡುವುದಕ್ಕೆ ಪುಟ್ಟದಾಗಿ ಕಂಡರೂ ಇದರಲ್ಲಿ ಕ್ಯಾಲ್ಸಿಯಂ, ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್ ಮತ್ತು ನಾರಿನಂಶದಂತಹ ಗುಣಗಳು ಹೇರಳವಾಗಿ ಕಂಡುಬರುತ್ತವೆ.
ತೊಂಡೆಕಾಯಿ ಕಡಿಮೆ ಮಟ್ಟದ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿರಿವ ತರಕಾರಿಯಾಗಿದೆ. ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇನ್ನು ಬ್ಲಡ್ ಶುಗರ್ ನಿಯಂತ್ರಣ ಮಾಡುವ ಸಲುವಾಗಿ ಈ ತರಕಾರಿಯನ್ನು ತಿನ್ನಲು ವಿಶೇಷ ವಿಧಾನ ಎಂದೇನಿಲ್ಲ. ನಿಮಗೆ ಬೇಕಾದ ರೀತಿಯಲ್ಲಿ ಈ ತರಕಾರಿಯನ್ನು ಮಡಿ ಸೇವಿಸಬಹುದು. ಆದರೆ ಎಣ್ಣೆ ಮತ್ತು ಮಸಾಲೆಗಳನ್ನು ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಉಪಯೋಗಿಸಿದರೆ ಒಳ್ಳೆಯದು.
ತೊಂಡೆಕಾಯಿ ಸೇವನೆಯಿಂದ ಜೀರ್ಣಕಾರಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದರಲ್ಲಿ ಹೇರಳವಾದ ಫೈಬರ್ ಅಂಶವಿದ್ದು, ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
ಬೊಜ್ಜು ಕಡಿಮೆ ಮಾಡಲು ತೊಂಡೆಕಾಯಿ ಸಹಕಾರಿ. ಇದು ಕಡಿಮೆ ಕ್ಯಾಲೊರಿ ಹೊಂದಿರುವ ತರಕಾರಿ. ಹಾಗಾಗಿ ಬೊಜ್ಜು ನಿಯಂತ್ರಣದಲ್ಲಿ ಇಡಲು ಇದು ಸಹಾಯ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ