ಬಿಜೆಪಿಯು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದೆ.
ರಾಜ್ಯಸಭೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಬಿ.ಕೆ. ಹರಿಪ್ರಸಾದ್, ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರಾದ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಸೇರಿದಂತೆ ಪಕ್ಷದ ಅನೇಕ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದು, ಶುಭ ಕೋರಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸ್ವಾಗತಿಸಲಾಯಿತು.