PHOTOS

ಶೀಘ್ರದಲ್ಲೇ ರಾಹು-ಗುರುವಿನ ಮೈತ್ರಿ ಅಂತ್ಯ, ಈ ರಾಶಿಗಳ ಜನರ ಗೋಲ್ಡನ್ ಟೈಮ್ ಆರಂಭವಾಗಲಿದೆ!

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 30 ರಂದು ದೇವಗುರು ಬೃಹಸ್ಪತಿ ಹಾಗೂ ರಾಹುವಿನ ಯುತಿ ಅಂತ್ಯವಾಗಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಶ್ರೀಗಣೇಶ...

Advertisement
1/5

End Of Rahu Guru Conjunction: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 30 ರಂದು ದೇವಗುರು ಬೃಹಸ್ಪತಿ ಹಾಗೂ ರಾಹುವಿನ ಯುತಿ ಅಂತ್ಯವಾಗಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಶ್ರೀಗಣೇಶ ಕೃಪೆಯಿಂದ ಅಪಾರ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದ್ದು, ಅವರ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ (Spiritual News In Kannada)  

2/5

ಮೇಷ ರಾಶಿ: ಈ ಅಪರೂಪದ ಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಯಲ್ಲಿಯೇ ಈ ಗುರು-ರಾಹುವಿನ ಮೈತ್ರಿ ನೆರವೇರುತ್ತಿದೆ. ಇದರ ಜೊತೆಗೆ ಶನಿಯ ತೃತೀಯ ದೃಷ್ಟಿ ಕೂಡ ಇರಲಿದೆ. ಇದರಿಂದ ಮೈತ್ರಿ ಮುರಿಯಲಿದ್ದು, ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆ ಇದೆ. ವಿದೇಶಕ್ಕೆ ಪ್ರಯಾಣದ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಸರ್ಕಾರಿ ನೌಕರಿಗಾಗಿ ಸಿದ್ಧತೆ ನಡೆಸುತ್ತಿರುವವರಿಗೆ ನೌಕರಿ ಸಿಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ನಿಮಗೆ ಲಾಭ ಸಿಗಲಿದೆ.    

3/5

ಸಿಂಹ ರಾಶಿ: ಈ ಅಪರೂಪದ ಯೋಗ ಸಿಂಹ ರಾಶಿಯ ಜಾತಕದವರಿಗೆ ಸಾಕಷ್ಟು ಶುಭ ಫಲಗಳನ್ನು ನೀಡಲಿದೆ. ಗುರು ನಿಮ್ಮ ಜಾತಕದ ಭಾಗ್ಯ ಸ್ಥಾನದ ಅಧಿಪತಿಯಾಗುವುದರ ಜೊತೆಗೆ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಹಾಗೂ ನಿಮ್ಮ ತಂದೆಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂತಾನ ಸುಖ ಪ್ರಾಪ್ತಿಗಾಗಿ ಹಂಬಲಿಸುತ್ತಿರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆಗಳಿವೆ. ವಿದೇಶ ಯಾತ್ರೆಯ ಯೋಗಗಳು ಕೂಡ ನಿರ್ಮಾಣಗೊಳ್ಳುತ್ತಿವೆ. ಧರ್ಮ-ಕರ್ಮದ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ.     

4/5

ಧನು ರಾಶಿ: ನಿಮ್ಮ ಪಾಲಿಗೆ ಈ ಅಪರೂಪದ ಯೋಗ ಸಾಕಷ್ಟು ಶುಭಫಲಗಳನ್ನು ನೀಡಲಿದೆ. ಏಕೆಂದರೆ, ನಿಮ್ಮ ಗೋಚರಜಾತಕದ ಅಧಿಪತಿ ಶಿಕ್ಷಣದ ಅಧಿಪತಿಯಾಗಿ ಭಾಗ್ಯ ಸ್ಥಾನದ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನಿಂತುಹೋದ ಕೆಲಸಗಳಿಗೆ ಮತ್ತೆ ವೇಗ ಸಿಗಲಿದೆ. ಆರೋಗ್ಯ ಸುಧಾರಣೆಯಾಗಲಿದೆ. ಷೇರು ಮಾರುಕಟ್ಟೆಯ ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ. ಚಿನ್ನದ ವಹಿವಾಟಿನಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಉಂಟಾಗಲಿದೆ.     

5/5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)    





Read More