Home> Sports
Advertisement

IND vs BAN: ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ರೋಹಿತ್ ಟೀಂ ಇಂಡಿಯಾಗೆ ಎಂಟ್ರಿ ಯಾವಾಗ ಗೊತ್ತಾ?

IND vs BAN 1st Test Match: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದ ವೇಳೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಈ ಗಾಯದಿಂದಾಗಿ ಅವರು ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಎರಡನೇ ಟೆಸ್ಟ್‌ಗೆ ಲಭ್ಯವಾಗಿದ್ದಾರೆ. ಅವರು ಡಿಸೆಂಬರ್ 18 ರಂದು ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ.

IND vs BAN: ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ರೋಹಿತ್ ಟೀಂ ಇಂಡಿಯಾಗೆ ಎಂಟ್ರಿ ಯಾವಾಗ ಗೊತ್ತಾ?

IND vs BAN 1st Test Match: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ನಡುವೆ ಟೀಂ ಇಂಡಿಯಾಕ್ಕೆ ಒಂದು ದೊಡ್ಡ ಒಳ್ಳೆಯ ಸುದ್ದಿ ಬರಲಿದೆ. ಎರಡು ತಂಡಗಳ ನಡುವೆ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಬಿಗ್ ಮ್ಯಾಚ್ ವಿನ್ನರ್ ಶೀಘ್ರದಲ್ಲೇ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ. ಗಾಯದಿಂದಾಗಿ ಈ ಆಟಗಾರನಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಭಾಗವಾಗಲು ಸಾಧ್ಯವಾಗಿರಲಿಲ್ಲ. ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 22 ರಿಂದ ನಡೆಯಲಿದೆ.

ಇದನ್ನೂ ಓದಿ: ಬಾವಿಯಲ್ಲಿ ಕಾದು ಕುಳಿತಿದ್ದ ಜವರಾಯ : ತಂದೆ ಸಾವಿನಿಂದ ಅನಾಥವಾಯ್ತು 15 ದಿನದ ಹಸುಗೂಸು

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದ ವೇಳೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಈ ಗಾಯದಿಂದಾಗಿ ಅವರು ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಎರಡನೇ ಟೆಸ್ಟ್‌ಗೆ ಲಭ್ಯವಾಗಿದ್ದಾರೆ. ಅವರು ಡಿಸೆಂಬರ್ 18 ರಂದು ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ.

ರೋಹಿತ್ ಶರ್ಮಾ ಗಾಯಗೊಂಡಿರುವ ಕಾರಣ ಮೊದಲ ಟೆಸ್ಟ್ ಪಂದ್ಯದ ಭಾಗವಾಗಿರಲಿಲ್ಲ. ಅವರು ಗಾಯಗೊಂಡ ನಂತರ ಢಾಕಾದಿಂದ ಮುಂಬೈಗೆ ಆಗಮಿಸಿದ್ದಾರೆ. ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಿದರು. ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಎರಡನೇ ಟೆಸ್ಟ್‌ನಲ್ಲಿ ಆಡಿದರೆ ಅವರು ನಾಯಕನಾಗಿ ಆಡುತ್ತಾರೆ.

ಇದನ್ನೂ ಓದಿ: PAN Card ಹೊಂದಿರುವವರಿಗೆ ಎಚ್ಚರಿಕೆ ನೀಡಿದ ಆದಾಯ ತೆರಿಗೆ ಇಲಾಖೆ!

ಮೊದಲ ಟೆಸ್ಟ್‌ನಲ್ಲಿ ಗಾಯಗೊಂಡ ರೋಹಿತ್ ಶರ್ಮಾ ಬದಲಿಗೆ ಯುವ ಬ್ಯಾಟ್ಸ್‌ಮನ್ ಅಭಿಮನ್ಯು ಈಶ್ವರನ್ ಅವರನ್ನು ತಂಡಕ್ಕೆ ಸೇರಿಸಲಾಯಿತು. ಆದರೂ ಅವರಿಗೆ ಪ್ಲೇಯಿಂಗ್ 11 ರಲ್ಲಿ ಆಡಲು ಅವಕಾಶ ಸಿಗಲಿಲ್ಲ. ರೋಹಿತ್ ಶರ್ಮಾ ಮರಳಿದ ಅಭಿಮನ್ಯು ಈಶ್ವರನ್ ಭಾರತಕ್ಕೆ ಮರಳಬಹುದು. ಅಭಿಮನ್ಯು ಈಶ್ವರನ್ ಅವರು ಈ ಹಿಂದೆ ಹಲವು ಸಂದರ್ಭಗಳಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದಾರೆ, ಆದರೆ ಅವರಿಗೆ ಒಮ್ಮೆಯೂ ಪ್ಲೇಯಿಂಗ್ 11 ರ ಭಾಗವಾಗಲು ಸಾಧ್ಯವಾಗಲಿಲ್ಲ. ಅಭಿಮನ್ಯು ಈಶ್ವರನ್ ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ತಂಡದ ನಾಯಕರಾಗಿದ್ದಾರೆ. ಈ ಸಮಯದಲ್ಲಿ ರಣಜಿ ಟ್ರೋಫಿ 2022-23 ಅನ್ನು ಸಹ ಆಡಲಾಗುತ್ತಿದೆ. ಆದ್ದರಿಂದ ಅವರು ಈ ಪಂದ್ಯಾವಳಿಗಾಗಿ ಭಾರತಕ್ಕೆ ಮರಳಬಹುದು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More