Home> Sports
Advertisement

Hardik Pandya: ಮೊದಲ ಟಿ20 ಪಂದ್ಯದಲ್ಲಿಲ್ಲ ಈ ಆಟಗಾರನಿಗೆ ಸ್ಥಾನ: ಬಹಿರಂಗ ಹೇಳಿಕೆ ನೀಡಿದ ಪಾಂಡ್ಯ

Hardik Pandya Statement on Prithvi Shah: ನಾಳೆ ರಾಂಚಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಆಟಗಾರನನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕವಾಗಿ ಹೇಳಿದ್ದಾರೆ.

Hardik Pandya: ಮೊದಲ ಟಿ20 ಪಂದ್ಯದಲ್ಲಿಲ್ಲ ಈ ಆಟಗಾರನಿಗೆ ಸ್ಥಾನ: ಬಹಿರಂಗ ಹೇಳಿಕೆ ನೀಡಿದ ಪಾಂಡ್ಯ

Hardik Pandya Statement on Prithvi Shah: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಳೆ ರಾತ್ರಿ 7 ಗಂಟೆಗೆ ರಾಂಚಿಯ JSCA ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ಒಂದು ದಿನ ಮೊದಲು ಅಂದರೆ ಜನವರಿ 26 ರಂದು ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಸಾರ್ವಜನಿಕ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ತಂಡದ ಆಟಗಾರನ ಬಗ್ಗೆ ಮಾತನಾಡಿದ್ದಾರೆ.

ನಾಳೆ ರಾಂಚಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಈ ಆಟಗಾರನನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕವಾಗಿ ಹೇಳಿದ್ದಾರೆ.

ಇದನ್ನೂ ಓದಿ: Virat Kohli : ನಾನು ನಂಬರ್-1, ನನ್ನ ನಂತರ ವಿರಾಟ್.. ಪಾಕ್ ಕ್ರಿಕೆಟಿಗನ ವಿವಾದಿತ ಹೇಳಿಕೆ!

ನ್ಯೂಜಿಲೆಂಡ್ ವಿರುದ್ಧದ ಈ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ರಾಂಚಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿ, ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಸಾರ್ವಜನಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಳೆ ರಾಂಚಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಅವರನ್ನು ಪ್ಲೇಯಿಂಗ್ XI ನಲ್ಲಿ ಸೇರಿಸಲಾಗಿಲ್ಲ. ಮೊದಲ ಟಿ20 ಪಂದ್ಯದಲ್ಲಿ ಇನ್ ಫಾರ್ಮ್ ಆರಂಭಿಕರಾದ ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ತೆರೆಯಲಿದ್ದಾರೆ ಎಂದು ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಗುರುವಾರ ಹೇಳಿದ್ದಾರೆ.

ಇಂದಿನ ದಿನಗಳಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಶುಬ್‌ಮನ್ ಗಿಲ್ ಬ್ಯಾಟಿಂಗ್ ಮಾಡುವ ವಿಧಾನವನ್ನು ಪರಿಗಣಿಸಿದರೆ, ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾ ಸದ್ಯಕ್ಕೆ ಕಾಯಬೇಕಾಗಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಶುಭಮನ್ ಗಿಲ್ ಅವರು ತಮ್ಮ ಕೊನೆಯ ನಾಲ್ಕು ODI ಇನ್ನಿಂಗ್ಸ್‌ಗಳಲ್ಲಿ ದ್ವಿಶತಕ ಸೇರಿದಂತೆ ಮೂರು ಶತಕಗಳನ್ನು ಗಳಿಸಿದ್ದಾರೆ. ಶುಬ್ಮನ್ ಗಿಲ್ ಉತ್ತಮ ಪ್ರದರ್ಶನ ನೀಡಿದ್ದು, ನ್ಯೂಜಿಲೆಂಡ್ ವಿರುದ್ಧದ ಈ ಟಿ20 ಸರಣಿಯಲ್ಲಿ ಅವರು ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭ್‌ಮನ್ ಗಿಲ್ ಬ್ಯಾಟಿಂಗ್ ಮಾಡುವ ರೀತಿಯಿಂದ ಅವರು ಈಗಾಗಲೇ ಟೀಮ್ ಇಂಡಿಯಾದ ಯೋಜನೆಯ ಭಾಗವಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದ್ದರಿಂದ ಹಾರ್ದಿಕ್ ಪಾಂಡ್ಯ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ:  IND vs NZ: ಪಾಂಡ್ಯರಿಂದ ಸಿಗುತ್ತಾ ಈ ಆಟಗಾರನಿಗೆ ಅವಕಾಶ: ಒಂದೇ ಒಂದು ಚಾನ್ಸ್ ಗಾಗಿ ಹಾತೊರೆಯುತ್ತಿದ್ದಾರೆ ಈ ಕ್ರಿಕೆಟರ್!

ಈ ಬಗ್ಗೆ ಮಾತನಾಡಿದ ಪಾಂಡ್ಯ,”ನಾನು ಹಲವು ವರ್ಷಗಳಿಂದ ನೆಟ್ಸ್‌ನಲ್ಲಿ ಹೊಸ ಚೆಂಡಿನೊಂದಿಗೆ ಬೌಲಿಂಗ್ ಮಾಡುತ್ತಿದ್ದೇನೆ. ಹಳೆಯ ಚೆಂಡಿನಲ್ಲೇ ಬೌಲಿಂಗ್ ಮಾಡುವ ಅಭ್ಯಾಸವಿದ್ದರೆ ಅಷ್ಟೊಂದು ಅಭ್ಯಾಸ ಮಾಡಬೇಕಿಲ್ಲ. ಇದು ಪಂದ್ಯದ ಪರಿಸ್ಥಿತಿಗೆ ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More