Bharat Biotech Intra Nasal Vaccine: ದೇಶವು ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿರುವ ಇಂದಿನ ಸಂದರ್ಭದಲ್ಲಿ ಭಾರತ ಕರೋನಾ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಿದೆ. ಮೂಗಿನ ಮೂಲಕ ನೀಡಲಾಗುವ ಕೊರೊನಾ ಲಸಿಕೆ ಪರೀಕ್ಷೆಯಲ್ಲಿ ಕೋವ್ಯಾಕ್ಸಿನ್ ಉತ್ಪಾದಕ ಕಂಪನಿಯಾಗಿರುವ ಭಾರತ್ ಬಯೋಟೆಕ್ ಗಮನಾರ್ಹ ಯಶಸ್ಸನ್ನು ಸಾಧಿಸಿದೆ. ಈ ಲಸಿಕೆಯ ವೈಜ್ಞಾನಿಕ ಹೆಸರು BBV154 ಆಗಿದ್ದು, ಮೂಗಿನ ಮೂಲಕ ನೀಡಲಾಗುವ ಈ ಲಸಿಕೆಯ ಎರಡು ರೀತಿಯ ಪರೀಕ್ಷೆಗಳನ್ನು ನಡೆಸಲಾಗಿದೆ. ಮೊದಲ ಪರೀಕ್ಷೆ ಎರಡು-ಡೋಸ್ ಪ್ರಾಥಮಿಕ ಕರೋನಾ ಲಸಿಕೆ ಮತ್ತು ಎರಡನೆಯದು ಬೂಸ್ಟರ್ ಡೋಸ್ನೊಂದಿಗೆ ಪರೀಕ್ಷೆ ನಡೆಸಲಾಗಿದೆ, ಇದನ್ನು ಕೋವ್ಶೀಲ್ಡ್ ಮತ್ತು ಕೋವ್ಯಾಕ್ಸಿನ್ ಅನ್ನು ಪಡೆದ ಜನರಿಗೆ ನೀಡಬಹುದಾಗಿದೆ. ಈ ಕುರಿತಾದ ಮಾನವ ಕ್ಲಿನಿಕಲ್ ಟ್ರಯಲ್ಸ್ ನ ಮೂರನೇ ಹಂತ ಪೂರ್ಣಗೊಂಡಿದ್ದು, ಅದರ ದತ್ತಾಂಶಗಳನ್ನೂ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಸಲ್ಲಿಸಲಾಗಿದೆ. ಈಗ ಡ್ರಗ್ ಕಂಟ್ರೋಲರ್ನ ವಿಷಯ ತಜ್ಞರ ಸಮಿತಿಯು ಈ ಡೇಟಾವನ್ನು ಪರಿಶೀಲಿಸಲಿದೆ.
ಪ್ರಯೋಗದಲ್ಲಿ ಅತ್ಯುತ್ತಮ ಫಲಿತಾಂಶಗಳು
Bharat Biotech completes clinical development for phase III trials and booster doses for BBV154 intranasal covid vaccine.#BharatBiotech #covid19vaccine #bbv154 #intranasalvaccine #covid19 pic.twitter.com/oh76drnezz
— BharatBiotech (@BharatBiotech) August 15, 2022
ಇದನ್ನೂ ಓದಿ-Health Tips: ಡಯಾಬಿಟಿಸ್ ರೋಗಿಗಳಿಗೆ ವರದಾನಕ್ಕೆ ಸಮಾನ ಈ ಹಣ್ಣು, ವಿಟಮಿನ್ ಗಳ ಪವರ್ ಹೌಸ್ ಎನ್ನಲಾಗುತ್ತದೆ
ಈ ರಾಜ್ಯಗಳಲ್ಲಿ ಲಸಿಕೆ ಸಿದ್ಧವಾಗಲಿದೆ
ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು ಕೋವಿಡ್ ಪ್ರೊಟೆಕ್ಷನ್ ಪ್ರೋಗ್ರಾಂ ಅಡಿಯಲ್ಲಿ ಈ ಲಸಿಕೆಗೆ ಭಾಗಶಃ ಹಣವನ್ನು ನೀಡಿದೆ. ಸ್ವಾತಂತ್ರ್ಯ ದಿನದಂದು ಈ ಮಾಹಿತಿಯನ್ನು ಹಂಚಿಕೊಂಡ ಭಾರತ್ ಬಯೋಟೆಕ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಇಲ್ಲಾ, ದೇಶದ ಮೊಟ್ಟಮೊದಲ ಮೂಗಿನ ಮೂಲಕ ನೀಡಲಾಗುವ ಲಸಿಕೆ ಅಭಿವೃದ್ಧಿಪಡಿಸುವುದು ಆರ್ಥಿಕವಾಗಿ ಒಂದು ಅಗ್ಗದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಏಕೆಂದರೆ, ಈ ಲಸಿಕೆಯನ್ನು 2 ರಿಂದ 8 ಡಿಗ್ರಿ ತಾಪಮಾನದಲ್ಲಿ ಸಂಗ್ರಹಿಸಬಹುದು. ಗುಜರಾತ್, ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರದ ಘಟಕಗಳಲ್ಲಿ ಇದನ್ನು ಉತ್ಪಾದಿಸುವ ಕೆಲಸ ನಡೆಯಲಿದೆ.
ಇದನ್ನೂ ಓದಿ-ದೇಹದ ಪ್ರೋಟೀನ್ ಕೊರತೆ ನೀಗಿಸುತ್ತದೆ ಈ ಐದು ಬಗೆಯ ಸಸ್ಯಾಹಾರ
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕರೋನಾ ವಿರುದ್ಧದ ಹೋರಾಟದಲ್ಲಿ ಬಲವಾಗಿ ಹೋರಾಡುತ್ತಿರುವ ದೇಶದ ಜನತೆ ಮತ್ತು ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕೆಂಪು ಕೋಟೆಯ ಆವರಣದಿಂದ ಮಾಡಿದ ಭಾಷಣದಲ್ಲಿ, ಭಾರತವು 200 ಕೋಟಿ ಡೋಸ್ ಕರೋನಾ ಲಸಿಕೆಯನ್ನು ಜನರಿಗೆ ಸಮಯಕ್ಕೆ ಅನುಗುಣವಾಗಿ ನೀಡುವ ದಾಖಲೆಯನ್ನು ಪೂರ್ಣಗೊಳಿಸಿದೆ, ಇದು ಬೇರೆ ಯಾವುದೇ ದೇಶಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೊರೊನಾ ವಿರುದ್ಧದ ಹೋರಾಟವು ಸಾಮೂಹಿಕ ಜನಜಾಗ್ರತಿಯ ಮತ್ತೊಂದು ಉತ್ತಮ ಉದಾಹರಣೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.