ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.